Mysuru, ಮೇ 24 -- ಮೈಸೂರು: ಮನೆಯವರ ವಿರೋಧದ ನಡುವೆಯೂ ತಾನು ಪ್ರೀತಿಸುತ್ತಿದ್ದ ಯುವಕನಿಗಾಗಿ ಮಗಳು ಮನೆ ಬಿಟ್ಟು ಹೋದ ಕಾರಣಕ್ಕೆ ಮನನೊಂದ ಒಂದೇ ಕುಟುಂಬದ ದಂಪತಿ ಹಾಗೂ ಇನ್ನೊಬ್ಬ ಮಗಳು ಮೂವರು ಕೆರೆಗೆ ಜಿಗಿದು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರಿನಲ್ಲಿ ನಡೆದಿದೆ. ಹಗ್ಗ ಕಟ್ಟಿಕೊಂಡು ಶನಿವಾರ ಕೆರೆಯಲ್ಲಿ ಮುಳುಗಿದ್ದ ಮೂವರ ಮೃತ ದೇಹಗಳು ಪತ್ತೆಯಾಗಿವೆ. ಬೂದನೂರು ಗ್ರಾಮದ ನಿವಾಸಿಗಳಾದ ಮಹದೇವಸ್ವಾಮಿ, ಪತ್ನಿ ಮಂಜುಳಾ, ಮಗಳು ಹರ್ಷಿತಾ ಮೃತ ಮೃತಪಟ್ಟವರು. ಮಹದೇವಸ್ವಾಮಿಯವರ ಹಿರಿಯ ಪುತ್ರಿ ಅರ್ಪಿತಾ ಪ್ರೀತಿಸುತ್ತಿದ್ದ ಹುಡುಗನ ಜೊತೆ ಮನೆ ಬಿಟ್ಟು ಹೋಗಿದ್ದಳು. ಇದರಿಂದ ಮನನೊಂದು ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಎಚ್‌ಡಿಕೋಟೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಮಗಳು ಪರಿಚಯಸ್ಥ ಯುವಕನನ್ನು ಪ್ರೀತಿಸುತ್ತಿದ್ದಳು. ಆತನನ್ನೇ ಮದುವೆಯಾಗುವುದಾಗಿಯೂ ಹೇಳಿದ್ದಳು. ಆದರೆ ಮನೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಶಿಕ್ಷಣ ಮುಗಿದ ನಂತರ ನೋಡೋಣ ಎಂದು ಪೋಷಕರು ಹೇಳಿದ್ದರು.ಆದರ...