ಭಾರತ, ಮೇ 16 -- ಮಂಗಳೂರು: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪೇಟೆಯ ಅಕ್ಕರಂಗಡಿ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಮಾರಕಾಯುಧದಲ್ಲಿ ಇರಿದ ಘಟನೆ ನಡೆದಿದೆ. ಇಲ್ಲಿನ ಅಕ್ಕರಂಗಡಿ ನಿವಾಸಿ ಹಮೀದ್ (38) ಎಂಬವರಿಗೆ ದುಷ್ಕರ್ಮಿಗಳು ಇರಿದಿದ್ದಾಗಿ ದೂರಲಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಶುಕ್ರವಾರ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ನಡೆದಿದೆ. ಅಕ್ಕರಂಗಡಿಯಲ್ಲಿದ್ದ ಪೈಂಟಿಂಗ್ ಕೆಲಸ ಮಾಡುತ್ತಿರುವ ಹಮೀದ್ ಯಾನೆ ಅಮ್ಮಿ ಅವರಿಗೆ ಬೈಕ್ ನಲ್ಲಿ ಆಗಮಿಸಿದ ಆಗಂತುಕರು ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಹಮೀದ್ ಅವರನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಹಮೀದ್ ಅಲ್ಲಿರುವುದನ್ನು ಗಮನಿಸಿ ಜನಸಂಚಾರ ವಿರಳವಾದ ಬಳಿಕ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ತಲವಾರು ಅಥವಾ ಚೂರಿಯಂಥ ಹರಿತವಾದ ಆಯುಧದಲ್ಲಿ ದಾಳಿ ಮಾಡಿದ್ದಾರೆ.

ಪೈಂಟರ್ ವೃತ್ತಿಯಲ್ಲಿ ನಿರತರಾಗಿರುವ ಹಮೀದ್ ಅವರಿಗೆ ಇರಿದು ತೆ...