ಭಾರತ, ಮೇ 25 -- ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ. ಮಾರ್ಚ್ 21ರ ಶುಕ್ರವಾರದಂದು ವಿಧಾನಸಭೆಯಲ್ಲಿ ಸದನದ ಕಾರ್ಯಕಲಾಪಗಳಿಗೆ ಅಡ್ಡಿಪಡಿಸಿ ಅಶಿಸ್ತಿನಿಂದ ನಡೆದುಕೊಂಡಿದ್ದ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಅವಧಿಗೆ ಅಮಾನತು ಮಾಡಲಾಗಿತ್ತು. ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಪ್ರತಿಪಕ್ಷ ನಾಯಕರು ಮನವಿ ಸಲ್ಲಿಸಿದ್ದರು. ಅಮಾನತಿಗೆ ಸಂಬಂಧಿಸಿದಂತೆ ಇಂದು (ಮೇ 25, ಭಾನುವಾರ) ಸ್ಪೀಕರ್ ಯುಟಿ ಖಾದರ್ ನೇತೃತ್ವದ ನಡೆದ ಸಭೆಯಲ್ಲಿ ಅಮಾನತು ಹಿಂಪಡೆಯುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ವಿಧಾನಸಭೆಯಲ್ಲಿ ಸ್ಪೀಕರ್ ಕುರ್ಚಿಗೆ ಅಗೌರವ ತೋರಿಸಿದ, ಮಸೂದೆಯ ಪ್ರತಿಗಳನ್ನು ಹರಿದು ಅಶಿಸ್ತು ತೋರಿದ ಆರೋಪದ ಮೇಲೆ ಮಾರ್ಚ್ 21‌ರಂದು 18 ಬಿಜೆಪಿ ಶಾಸಕರನ್ನು ಅಮಾನತ್ತು ಮಾಡಬೇಕೆಂದು ಪ್ರಸ್ತಾಪಿಸಿದ ನಿರ್ಣಯಕ್ಕೆ ಸ್ಪೀಕರ್ ಯುಟಿ ಖಾದರ್ ಅವರ ಮೂಲಕ ನಡೆದ ಸಭೆಯಲ್ಲಿ ಆಳುವ ಪಕ್ಷದಿಂದ ಅಂಗೀಕಾರ ಪಡೆಯಲಾಗಿತ್ತು. ಈ ಅಮಾನತ್ತು ಆರು ತಿಂಗಳ ಅವಧಿಯವರೆಗೆ ಅಂದರೆ ಸೆಪ್ಟಂಬರ್ ತಿಂಗಳ 21ರವರೆಗೆ ಎಂಬುದು ನಿರ್...