ಭಾರತ, ಮೇ 12 -- ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್: ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಕೇಸ್ ಸಂಬಂಧ ಭಾನುವಾರ, ಆರೋಪಿ ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ಅವರು ಹೆಣ್ಣೂರು ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು.
ನನಗೂ ಹಾಗೂ ಮೃತ ವಿನಯ್ ಸೋಮಯ್ಯಗೂ ವೈಯಕ್ತಿಕ ದ್ವೇಷ ಇಲ್ಲ. ವಿನಯ್ ಅಡ್ಮಿನ್ ಆಗಿದ್ದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಶಾಸಕ ಎ.ಎಸ್.ಪೊನ್ನಣ್ಣ ಕುರಿತು ಅಪಹಾಸ್ಯ ಮಾಡುವ ಪೋಸ್ಟ್ ಹಂಚಿಕೊಂಡಿದ್ದರು. ಹಾಗಾಗಿ ವಿನಯ್ ಸೋಮಯ್ಯ ಸೇರಿ ಗ್ರೂಪ್ನ ಮೂವರು ಅಡ್ಮಿನ್ಗಳ ವಿರುದ್ಧ ಮಡಿಕೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಅದರಂತೆ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದರು. ಈ ಕೇಸ್ನ ಮೂವರು ಆರೋಪಿಗಳು ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಹೀಗಾಗಿ ವಿನಯ್ ಸೋಮಯ್ಯ ಆತ್ಮಹತ್ಯೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಮುಖಂಡ ತೆನ್ನಿರಾ ಮೈನಾ ತನಿಖಾಧಿಕಾರಿ ಎದುರು ಹಾಜಾರಾಗಿ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದ...
Click here to read full article from source
To read the full article or to get the complete feed from this publication, please
Contact Us.