Bangalore, ಮೇ 22 -- ಬೆಂಗಳೂರು: ಭಾರಿ ಗಾಳಿಗೆ ಮರವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ ಎನ್ಡಿಟಿವಿ ವರದಿಯ ಪ್ರಕಾರ, ಬೃಹತ್ ಮರವು ಯಾವುದೇ ಮುನ್ಸೂಚನೆಯಿಲ್ಲದೆ ಕುಸಿದು, ಚಲಿಸುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದು ಸವಾರ ಮತ್ತು ಹಿಂಬದಿ ಸವಾರ ಇಬ್ಬರೂ ರಸ್ತೆಗೆ ಉರುಳುವ ಭಯಾನಕ ಕ್ಷಣವನ್ನು ಸಿಸಿಟಿವಿ ದೃಶ್ಯಾವಳಿಗಳು ಸೆರೆಹಿಡಿದಿವೆ. ಗಾಯಾಳುಗಳನ್ನು ಕೂಡಲೇ ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಾರ ತೀವ್ರವಾಗಿ ಗಾಯಗೊಂಡಿದ್ದು, ಹಿಂಬದಿ ಸವಾರ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿ ತಿಳಿಸಿದೆ.
ಬೆಂಗಳೂರು ನಗರದಾದ್ಯಂತ ಸುರಿದಿರುವ ಮಳೆಯ ಮಧ್ಯೆ ಈ ಘಟನೆ ನಡೆದಿದ್ದು, ಈ ವೇಳೆ ಮರಗಳು ಬಿದ್ದು ಮತ್ತು ತೀವ್ರ ಸಂಚಾರ ಅಡೆತಡೆಗಳಿಗೆ ಕಾರಣವಾಯಿತು. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರಿನಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ನೀಡಿತ್ತು.
ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.