ಭಾರತ, ಮಾರ್ಚ್ 8 -- ಬೆಂಗಳೂರು: ಭಾನುವಾರ ನೇರಳೆ ಮಾರ್ಗದ ಮೆಟ್ರೊದಲ್ಲಿ ಪ್ರಯಾಣ ಮಾಡುವ ಹಾಗಿದ್ದರೆ ಕೊಂಚ ಯೋಚಿಸಿ, ಯಾಕೆಂದರೆ ಬೆಳಗಿನ ಹೊತ್ತು ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ಇರೊಲ್ಲ. ಹಳಿ ನಿರ್ವಹಣಾ ಕಾಮಗಾರಿ ನಡೆಸಲು ಮಾರ್ಚ್‌ 9 ರಂದು ಬೆಳಗ್ಗೆ 7ರಿಂದ 10ರವರೆಗೆ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೊ ನಿಲ್ದಾಣಗಳ ನಡುವೆ ಮೆಟ್ರೊ ಸಂಚಾರ ಸ್ಥಗಿತಗೊಳ್ಳಲಿದೆ.

ಈ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ.ಆರ್. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸರ್.ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಗಳನ್ನು ಮುಚ್ಚಲಾಗಿರುತ್ತದೆ.

ಅಂದು ಬೆಳಿಗ್ಗೆ 10 ರವರೆಗೆ ಕ್ಯೂಆ‌ರ್ ಟಿಕೆಟ್‌ಗಳ ಖರೀದಿಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಲ್ಲಿ ರೈಲು ಲಭ್ಯ ಇಲ್ಲದೇ ಇರುವುದರಿಂದ ನೇರಳ...