ಭಾರತ, ಮೇ 17 -- ಬೆಂಗಳೂರು: ಆರ್‌ಸಿಬಿ ಹಾಗೂ ಕೆಕೆಆರ್‌ ನಡುವೆ ನಡೆಯಬೇಕಿದ್ದ ಐಪಿಎಲ್‌ ಪಂದ್ಯವು, ಮಳೆಯಿಂದಾಗಿ ರದ್ದಾಗಿದೆ. ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಸುರಿದ ಕಾರಣದಿಂದಾಗಿ, ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಪಂದ್ಯವು ಕನಿಷ್ಠ ಟಾಸ್‌ ಪ್ರಕ್ರಿಯೆ ಕೂಡಾ ನಡೆಸಲಾಗದೆ ರದ್ದಾಗಿದೆ. ಇದರೊಂದಿಗೆ ಹಾಲಿ ಚಾಂಪಿಯನ್ ಕೋಲ್ಕತ್ತಾ‌ ನೈಟ್‌ ರೈಡರ್ಸ್‌ ತಂಡವು ಪ್ರಸಕ್ತ ಆವೃತ್ತಿಯ ಐಪಿಎಲ್‌ ಟೂರ್ನಿಯಿಂದ ಹೊರಬಿದ್ದಿದೆ. ಅತ್ತ ಆರ್‌ಸಿಬಿ ತಂಡ 1 ಅಂಕ ಪಡೆದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ‌ ಲಗ್ಗೆ ಹಾಕಿದೆ. ಇದರೊಂದಿಗೆ ಪ್ಲೇ ಆಫ್‌ ಹಂತದಿಂದ ಕೇವಲ ಒಂದು ಹೆಜ್ಜೆಯಷ್ಟೇ ಹಿಂದಿದೆ.

(ಸುದ್ದಿ ಅಪ್ಡೇಟ್‌ ಆಗಲಿದೆ)

Published by HT Digital Content Services with permission from HT Kannada....