Bangalore, ಮೇ 4 -- ಬೆಂಗಳೂರು: ಬೇಸಿಗೆ ಕಾಲದ ಮಾರ್ಚ್‌, ಏಪ್ರಿಲ್‌ ನ ನಂತರ ಮೇ ತಿಂಗಳಲ್ಲೂ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ಭಾನುವಾರವೂ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ, ದಕ್ಷಿಣ ಕರ್ನಾಟಕ ಭಾಗದ ಹೆಚ್ಚಿನ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಕರ್ನಾಟಕದ ನಾಲ್ಕೈದು ಜಿಲ್ಲೆಗಳಲ್ಲಿ ಮಳೆಯಾಗಬಹುದು. ಆದರೆ ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು ಆಗೂ ಹಾಸನ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಾತ್ರ ಭಾರೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲೂ ಗುಡುಗು ಸಹಿತ ಹಗುರ ಮಳೆಯಾಗಬಹುದು ಎನ್ನುವ ಸೂಚನೆಗಳಿವೆ. ಕಲಬುರಗಿ ಜಿಲ್ಲೆಯಲ್ಲಿ ಬಿಸಿಲ ಪ್ರಮಾಣ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿದ್ದು. ಭಾನುವಾರ ಕಲಬುರಗಿ ಜಿಲ್ಲೆಯಲ್ಲೂ ಮಳೆಯಾಗಿ ವಾತಾವರಣ ತಂಪಾಗಿಸುವ ಲಕ್ಷಣಗಳಿವೆ.

Published by HT Digital Content Services with permission from HT Kannada....