ಭಾರತ, ಮೇ 18 -- ಬೆಂಗಳೂರು: ಬೆಂಗಳೂರು ಮಹಾನಗರ ಸೇರಿದಂತೆ ಕರ್ನಾಟಕದ ನಾನಾ ಭಾಗಗಳಲ್ಲಿ ಶನಿವಾರ ಎಡಬಿಡದೇ ಮಳೆ ಸುರಿದಿದ್ದು. ಮೇ 18ರ ಭಾನುವಾರವೂ ಭಾರೀಯಿಂದ ಅತೀ ಭಾರೀ ಮಳೆ ಹಲವು ಭಾಗಗಳಲ್ಲಿ ಆಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ ನೀಡಿದೆ. ದಕ್ಷಿಣ ಒಳನಾಡು, ಕರಾವಳಿ ಪ್ರದೇಶದ ಜಿಲ್ಲೆಗಳು ಸೇರಿ 16 ಜಿಲ್ಲೆಗಳಲ್ಲಿ ಇದರಿಂದ ಹಲವು ಭಾಗಗಳಲ್ಲಿ ರೆಡ್ ಅಲರ್ಟ್ ಕೂಡ ಘೋಷಿಸಲಾಗಿದೆ. ಬೆಂಗಳೂರು ನಗರದ ಹಲವು ಕಡೆ ಮಳೆಯಿಂದ ಜನಜೀವನವೇ ಅಸ್ತವ್ಯಸ್ತಗೊಂಡಿದೆ. ಇದೇ ರೀತಿ ತುಮಕೂರು, ಚಿಕ್ಕಮಗಳೂರು, ಬಳ್ಳಾರಿ ಭಾಗದಲ್ಲೂ ನಿರಂತರ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿನ ಮಳೆಯಿಂದಾಗಿ ಸಣ್ಣ ಪುಟ್ಟ ನದಿಗಳೂ ಉಕ್ಕಿ ಹರಿಯುತ್ತಿವೆ. ಈ ವಾರದಲ್ಲೂ ಕರ್ನಾಟಕದ ಹಲವು ಕಡೆ ಮಳೆಯಾಗುವ ಸೂಚನೆ ನೀಡಲಾಗಿದೆ.
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.