Bangalore, ಮೇ 16 -- ಬೆಂಗಳೂರು: ಬೆಂಗಳೂರು ಮಹಾನಗರ ಸೇರಿದಂತೆ ಕರ್ನಾಟಕದ 13 ಜಿಲ್ಲೆಗಳಲ್ಲಿ ಮೇ 16ರ ಗುರುವಾರವೂ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಲೇ ಇದ್ದು, ಇದು ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ವಿಜಯಪುರ, ಬಳ್ಳಾರಿ, ತುಮಕೂರು, ಕೋಲಾರ ಸಹಿತ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಪೂರ್ವ ಮುಂಗಾರಿನ ಅಬ್ಬರದಿಂದಾಗಿ ಉಷ್ಣಾಂಶದಲ್ಲೂ ಹಲವು ಕಡೆ ಇಳಿಕೆ ಕಂಡು ಬಂದಿದೆ. ಉತ್ತರ ಕರ್ನಾಟಕದ ಮೂರ್ನಾಲ್ಕು ಜಿಲ್ಲೆ ಹೊರತುಪಡಿಸಿದರೆ ಎಲ್ಲೆಡೆ ಗರಿಷ್ಠ ಉಷ್ಣಾಂಶದ ಪ್ರಮಾಣವು 40 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇತ್ತು.

Published by HT Digital Content Services with permission from HT Kannada....