Bengaluru, ಏಪ್ರಿಲ್ 1 -- ಬೆಂಗಳೂರು: ಏಪ್ರಿಲ್ 1 ರಿಂದ ಬೆಂಗಳೂರು ನಿವಾಸಿಗಳಿಗೆ ಶಾಕ್ ಮೇಲೆ ಶಾಕ್ ನೀಡುತ್ತಿದೆ ಕರ್ನಾಟಕ ಸರ್ಕಾರ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಡೀಸೆಲ್, ಹಾಲು, ಮೊಸರು, ವಿದ್ಯುತ್ ದರ ಏರಿಕೆ ಜಾರಿಗೆ ಮಾಡಿರುವುದರ ಜತೆಗೆ ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ ವಿಧಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮನೆ, ಅಂಗಡಿ, ಹೋಟೆಲ್ ಕಸಕ್ಕೂ ತೆರಿಗೆ ಪಾವತಿ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ. ಈ ಮೂಲಕ ಬಿಬಿಎಂಪಿ 600 ಕೋಟಿ ರೂಪಾಯಿ ಆದಾಯ ಸಂಗ್ರಹದ ಗುರಿ ಹಾಕಿಕೊಂಡಿದೆ.
ಅಂಗಡಿ ಮುಂಗಟ್ಟುಗಳಲ್ಲಿ ಸಂಗ್ರಹಿಸುವ ಪ್ರತಿ ಕೆಜಿ ಕಸಕ್ಕೆ 12 ರೂಪಾಯಿ ತೆರಿಗೆ ಸಂಗ್ರಹಿಸಲಿದೆ. ಪ್ರತಿ ತಿಂಗಳು ಕಸ ಸಂಗ್ರಹ ಮತ್ತು ವಿಲೇವಾರಿ ವೆಚ್ಚ ಹೆಚ್ಚಾಗುತ್ತಿದ್ದು, ತೆರಿಗೆ ಸಂಗ್ರಹ ಅನಿವಾರ್ಯ ಎಂದು ಬಿಬಿಎಂಪಿ ಸಮರ್ಥಿಸಿಕೊಂಡಿದೆ. ಇನ್ನು ವಾಸದ ಮನೆಗಳಿಗೆ ಕಟ್ಟಡದ ವಿಸ್ತೀರ್ಣದ ಆಧಾರದ ಮೇಲೆ ಕಸದ ಶುಲ್ಕ ನಿಗದಿಪಡಿಸಲಾಗಿದೆ. ಆಸ್ತಿ ತೆರಿಗೆ ಜತೆಯಲ್ಲಿಯೇ ಕಸ ತೆ...
Click here to read full article from source
To read the full article or to get the complete feed from this publication, please
Contact Us.