ಭಾರತ, ಮಾರ್ಚ್ 12 -- ಬೆಂಗಳೂರು: ಕರ್ನಾಟಕ ಬಿಜೆಪಿ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ಮಂಜುಳಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿದ್ದಾರೆ.

ಮಂಜುಳಾ ಸಾವಿಗೆ ಶರಣಾದ ಸುದ್ದಿ ತಿಳಿಯುತ್ತಿದ್ದಂತೆ ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಜೀವನದಲ್ಲಿ ಜಿಗುಪ್ಸೆ ಬಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಜೀವನದಲ್ಲಿ ಹೆಸರು ಮಾಡಬಹುದು, ಹಣ ಗಳಿಸಬಹುದು. ಆದರೆ, ನೆಮ್ಮದಿ ಇರಬೇಕು. ನನಗೆ ಆ ನೆಮ್ಮದಿಯೇ ಇರಲಿಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.

ಮಂಜುಳಾ ಅವರು ಹಲವು ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ...