Bangalore, ಏಪ್ರಿಲ್ 6 -- ಬೆಂಗಳೂರು: ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಮೈಸೂರು ರಸ್ತೆಯಲ್ಲಿರುವ ಪ್ರಸಿದ್ದ ಗಾಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ರಥೋತ್ಸವ ನಡೆಯಲಿದ್ದು, ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಆದ್ದರಿಂದ ಏಪ್ರಿಲ್‌ 6 ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಏ.8 ಮಂಗಳವಾರ ಬೆಳಿಗ್ಗೆ 10 ಗಂಟೆಯವರೆಗೆ ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಕೆಲವೊಂದು ಸಂಚಾರ ಮಾರ್ಪಾಡು ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಎರಡು ದಿನಗಳವರಗೆ ನಿರ್ಬಂಧ ಇರುವುದರಿಂದ ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆಯೂ ಸೂಚನೆಗಳನ್ನು ನೀಡಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪರ್ಯಾಯ ಮಾರ್ಗಗಳ ಆದೇಶ ಹೊರಡಿಸಿದ್ದಾರೆ.

1. ಸಂಚಾರ ನಿರ್ಬಂಧ: ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿ ಜಂಕ್ಷನ್ ನಿಂದ ಮೈಸೂರು ರಸ್ತೆ ಕಿಂಕೋ ಜಂಕ್ಷನ್ ವರೆಗೂ (ಪೂರ್ವದಿಂದ ಪಶ್ಚಿಮದ ಕಡೆಗೆ) ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ. ನಗರದ ಒಳಭಾಗದದಿಂ...