ಭಾರತ, ಮೇ 21 -- ಜಲಮಂಡಳಿ ನೀರಿನ ಅದಾಲತ್‌: ಬೆಂಗಳೂರು ಜಲಮಂಡಳಿಯ ವಿವಿಧ ಉಪವಿಭಾಗಗಳಲ್ಲಿ ಗುರುವಾರ (ಮೇ 22) ಬೆಳಿಗ್ಗೆ 9.30ರಿಂದ 11 ಗಂಟೆ ತನಕ ನೀರಿನ ಅದಾಲತ್ ನಡೆಯಲಿದೆ ಎಂದು ಮಂಡಳಿ ಪ್ರಕಟಣೆ ತಿಳಿಸಿದೆ. ಇದರಂತೆ, ಬೆಂಗಳೂರು ಜಲ ಮಂಡಳಿಯ ಆಗ್ನೇಯ -3, ಆಗ್ನೇಯ 6, ಪಶ್ಚಿಮ 1-3, ವಾಯವ್ಯ -5, ಉತ್ತರ 2-3, ದಕ್ಷಿಣ 1-3, ನೈಋುತ್ಯ - 3, ನೈಋತ್ಯ -6, ಮತ್ತು ಪೂರ್ವ 2-4, ಉಪವಿಭಾಗಗಳಲ್ಲಿ ನೀರಿನ ಅದಾಲತ್ ನಡೆಯಲಿದೆ.

ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಮೇ 22 ರಂದು ಬೆಳಿಗ್ಗೆ 9.30 ಗಂಟೆಯಿಂದ 11 ಗಂಟೆಯವರೆಗೆ ನೀರಿನ ಅದಾಲತ್‍ನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಜಲ ಮಂಡಳಿ ಪ್ರಕಟಣೆ ತಿಳಿಸಿದೆ.

ಅದಾಲತ್ ಸೇವಾ ಠಾಣೆಗಳಾದ ಅರಳೂರು, ದೊಡ್ಡ ಕಣ್ಣನಹಳ್ಳಿ, ಕಸವನಹಳ್ಳಿ, ಬಿ.ಟಿ.ಎಂ ಲೇಔಟ್, 1,2 ಮತ್ತು 3, ವೆಸ್ಟ್ ಆಫ್ ಕಾರ್ಡ್ ರಸ್ತೆ, 1 ಮತ...