Bengaluru, ಏಪ್ರಿಲ್ 15 -- ಬೆಂಗಳೂರು ನೀರಿನ ಅದಾಲತ್: ಬೆಂಗಳೂರು ಮಹಾನಗರದಲ್ಲಿ ಬೆಂಗಳೂರು ಜಲ ಮಂಡಳಿಯ ವಿವಿಧ ಉಪ ವಿಭಾಗಗಳಲ್ಲಿ ಏಪ್ರಿಲ್ 17 ರಂದು ಬೆಳಿಗ್ಗೆ ನೀರಿನ ಅದಾಲತ್ ನಡೆಯಲಿದೆ. ವಿಶೇಷವಾಗಿ, ಬೆಂಗಳೂರು ಜಲ ಮಂಡಳಿಯ ವಾಯುವ್ಯ-2, ವಾಯುವ್ಯ-4, ಕೇಂದ್ರ 1-2, ಈಶಾನ್ಯ - 2, ಉತ್ತರ 1-2, ಉತ್ತರ 2-2, ದಕ್ಷಿಣ 1-2, ದಕ್ಷಿಣ 2-2, ನೈರುತ್ಯ -2, ನೈರುತ್ಯ -5, ಪೂರ್ವ 1-3 ಮತ್ತು ಪೂರ್ವ 2-3, ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದು ಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನೀರಿನ ಅದಾಲತ್ ನಡೆಯಲಿದೆ. ಈ ವಿಭಾಗಳಲ್ಲಿ ಏಪ್ರಿಲ್ 17ರಂದು ಬೆಳಿಗ್ಗೆ 9.30 ಗಂಟೆಯಿಂದ 11.00 ಗಂಟೆಯವರೆಗೆ ನೀರಿನ ಅದಾಲತ್ ನಡೆಸಲಾಗುವುದು ಎಂದು ಬೆಂಗಳೂರು ಜಲ ಮಂಡಳಿ ಮೂಲಗಳು ತಿಳಿಸಿವೆ.
ನೀರಿನ ಅದಾಲತ್ ಸೇವಾಠಾಣೆಗಳು ಹೆಚ್.ಎಂ.ಟಿ ಪೀಣ್ಯ, ದಾಸರಹಳ್ಳಿ, ಪೀಣ್ಯ, ಲಿಂಗಧೀರನಹಳ್ಳಿ, ಅಂದರಹಳ್ಳ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.