Bangalore, ಮೇ 20 -- ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಭಾರೀ ಮಳೆಯ ಪರಿಣಾಮವಾಗಿ ಅಲ್ಲಲ್ಲಿ ಅನಾಹುತಗಳಾಗಿದ್ದು, ಇನ್ನೂ ಮಳೆಯಾಗುವ ಮುನ್ಸೂಚನೆಯಿದೆ. ಇದರ ನಡುವೆ ಬೆಂಗಳೂರು ಆಡಳಿತವು ಮಳೆ ಅನಾಹುತ ನಡೆದ ಸ್ತಳಗಳಿಗೆ ಭೇಟಿ ನೀಡಿ ಪರಿಹಾರ ನೀಡಿದ್ದರೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸೋಮವಾರ ಪರಿಸ್ಥಿತಿ ಪರಿಶೀಲನೆ ಮಾಡಿದರು. ಮಂಗಳವಾರ ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಸಿಎಂ ಸಹಿತ ಎಲ್ಲಾ ಸಚಿವರು ಭಾಗಿಯಾಗುತ್ತಿದ್ದಾರೆ. ಇದಲ್ಲದೇ ಸಂಜೆ ವೇಳೆ ಸಂಚಾರ ದಟ್ಟಣೆ ಹೆಚ್ಚಿರುವ ಕಾರಣ ಜನರಿಗೆ ತೊಂದರೆಯಾಗುತ್ತದೆ ಎಂದು ಮನಗಂಡು ಸೋಮವಾರ ಕೆಲವು ಸ್ಥಳಗಳಿಗೆ ಭೇಟಿ ನೀಡಲಾಗಿದೆ. ಮೇ 21ರ ಬುಧವಾರ ಇಡೀ ದಿನ ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರಿನ ಶಾಸಕರೊಂದಿಗೆ ನಗರ ಪ್ರದಕ್ಷಿಣೆ ಮಾಡಲಾಗುವುದು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಸೂಕ್ಷ್ಮ ಪ್ರದೇಶಗಳಿಗೆ ಭೇಟಿ...