Bengaluru, ಮೇ 1 -- ಬೆಂಗಳೂರು ಹವಾಮಾನ: ಬೆಂಗಳೂರಿನಲ್ಲಿ ಗುರುವಾರ (ಮೇ 1) ರಾತ್ರಿಯಾಗುತ್ತಲೇ ಕೆಲವು ಪ್ರದೇಶಗಳಲ್ಲಿ ಮಳೆಯಾಗತೊಡಗಿದೆ. ಕಳೆದ ಎರಡು ದಿನಗಳಿಂದ ಸಂಜೆ ವೇಳೆ ಮಳೆ ಸುರಿಯುತ್ತಿದ್ದು, ಇಂದು ಕೂಡ ಮುಂದುವರಿದಿದೆ. ಗುರುವಾರದ ಭಾರಿ ಮಳೆಗೆ ಆಟೋದ ಮೇಲೆ ಮರ ಬಿದ್ದು ಚಾಲಕ ಮೃತಪಟ್ಟ ದುರದೃಷ್ಟಕರ ಘಟನೆ ನಡೆದಿದೆ.

ಗಾಳಿ ಮಳೆಗೆ ಮರ ಒಂದು ಆಟೋ ಮೇಲೆ ಬಿದ್ದು, ಅದರ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಕತ್ರಿಗುಪ್ಪೆಯ ಎಂಎಂ ಬಾರ್ ಸಮೀಪ ನಡೆದಿದೆ. ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರಿನ ಮೆಜೆಸ್ಟಿಕ್​, ಕೆ.ಆರ್.ಮಾರ್ಕೆಟ್​, ರಾಜಾಜಿನಗರ, ಬಸವೇಶ್ವರ ನಗರ, ನಂದಿನಿ ಲೇಔಟ್, ರಿಚ್ಮಂಡ್ ಟೌನ್, ಶಾಂತಿನಗರ, ಕಾರ್ಪೊರೇಷನ್, ನಾಗರಬಾವಿ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.

ಏಕಾಕಿಯಾಗಿ ಮಳೆ ಸುರಿದ ಕಾರಣ ಜನಜೀವನ ಅಸ್ತವ್ಯಸ್ತವಾಗಿದೆ. ವಾಹನ ಸವಾರರು ತೊಂದರೆಗೆ ಒಳಗಾದರು.

ಮಳೆ ನೀರು ರಸ್ತೆಯಲ್ಲಿ ನಿಂತ ಕಾರಣ ವಾಹನ ಸಂಚಾರಕ್ಕೂ ಅಡ್ಡಿ ಉಂ...