ಭಾರತ, ಜನವರಿ 31 -- ಬೆಂಗಳೂರು: ಆದಾಯಕ್ಕಿಂತ ಜಾಸ್ತಿ ಆದಾಯ ಹೊಂದಿರುವ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳ್ಳಗೆ ಬೆಂಗಳೂರು, ಬೆಳಗಾವಿ, ರಾಯಚೂರು, ಬಾಗಲಕೋಟೆ ಸೇರಿದಂತೆ ಹಲವೆಡೆ ಭ್ರಷ್ಟರ ಬೇಟೆಯಾಡಿದ್ದಾರೆ. ಬಾಗಲಕೋಟೆಯ ಗ್ರಾಮ ಪಂಚಾಯತ್ ಪಿಡಿಒ, ಬೆಳಗಾವಿಯಲ್ಲಿ ಇಬ್ಬರು ಅಧಿಕಾರಿಗಳು, ರಾಯಚೂರಿನಲ್ಲಿ ಜಿಲ್ಲಾ ಪಂಚಾಯತ್ ಲೆಕ್ಕಪತ್ರ ಅಧಿಕಾರಿ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಬಿಬಿಎಂಪಿ ಅಧಿಕಾರಿಯ ಮನೆಗೂ ದಾಳಿ ನಡೆಸಿರುವ ಲೋಕಾಯುಕ್ತ ದಾಖಲೆಗಳ ಪರಿಶೀಲನೆ ನಡೆಸಿದೆ. ಲೋಕಾಯುಕ್ತ ಡಿವೈಎಸ್​ಪಿ ಸಿದ್ದೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಇದನ್ನೂ ಓದಿ: ಬೆಂಗಳೂರಿನ ಹೊರೆ ತಗ್ಗಿಸಲು ಸ್ಯಾಟಲೈಟ್ ಟೌನ್‌ಶಿಪ್‌ ಆಗಿ 5 ತಾಲೂಕುಗಳ ಅಭಿವೃದ್ಧಿ; ಮಹಾನಗರ ಪಾಲಿಕೆಯಾಗಿ ಬೀದರ್ ಮೇಲ್ದರ್ಜೆಗೆ

ಇದನ್ನೂ ಓದಿ: ಸಿಟಿ ರವಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಮಧ್ಯಂತರ ತಡೆ; ವಿನಯ ಕುಲಕರ್ಣಿ, ಯತ್ನಾಳ್ ಪ್ರಕರಣ ರದ್ದು; ರೇವಣ್ಣಗೂ ತಾತ್ಕ...