ಭಾರತ, ಜನವರಿ 30 -- ಋತು ಬದಲಾದಂತೆ, ದೇಹ ಮತ್ತು ಮನಸ್ಸು ಎರಡನ್ನೂ ಪೋಷಿಸುವ ಹಣ್ಣು, ತರಕಾರಿಗಳನ್ನು ತಿನ್ನುವುದರಿಂದ ಅನೇಕ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಪ್ರಕೃತಿಯು ಬದಲಾಗುತ್ತಿರುವ ಹವಾಮಾನಕ್ಕೆ ಹೊಂದಿಕೆಯಾಗುವ ಆಹಾರಗಳನ್ನು ಒದಗಿಸುತ್ತದೆ. ಇದರಿಂದ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ಸಿಗುತ್ತವೆ. ಚಳಿಗಾಲದಿಂದ ಬೇಸಿಗೆಗೆ ಪರಿವರ್ತನೆಯ ಸಮಯದಲ್ಲಿ, ಋತುಮಾನದ ಆಹಾರಗಳನ್ನು ಸೇವಿಸುವುದರಿಂದ ದೇಹವು ಬದಲಾಗುತ್ತಿರುವ ತಾಪಮಾನಕ್ಕೆ ಹೊಂದಿಕೊಳ್ಳಲು ಸಹಾಯ ಮಾಡುತ್ತದೆ. ಇದು ದೇಹವನ್ನು ನಿರ್ಜಲೀಕರಣದಿಂದ ಕಾಪಾಡಲು, ಅಲರ್ಜಿ ಸೋಂಕುಗಳ ವಿರುದ್ಧ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಇದೀಗ ಚಳಿಗಾಲ ಮುಗಿಯುವ ಹಂತದಲ್ಲಿದ್ದು, ಬೇಸಿಗೆಯ ಆಗಮನಕ್ಕೆ ಕೆಲವೇ ದಿನಗಳು ಬಾಕಿಯಿದೆ. ಹೀಗಾಗಿ ಚಳಿಗಾಲದಿಂದ ಬೇಸಿಗೆಗೆ ಪರಿವರ್ತನೆಯಾಗುವಾಗ ಯಾವ ಹಣ್ಣು-ತರಕಾರಿಗಳನ್ನು ತಿನ್ನುವುದು ಉತ್ತಮ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.

ಕಲ್ಲಂಗಡಿ ಹಣ್ಣು: ಕಲ್ಲಂಗಡಿ ಹಣ್ಣು ಶೇ. 90ಕ್ಕಿಂತ ಹೆಚ್ಚು ನೀರಿನ ಅಂಶದಿಂದ ಸಮ...