ಭಾರತ, ಫೆಬ್ರವರಿ 27 -- ಗುಜರಾತ್ ಜೈಂಟ್ಸ್ ಬೌಲರ್ಗಳ ಅಬ್ಬರದಿಂದ ಹಾಗೂ ತಮ್ಮ ಕಳಪೆ ಬ್ಯಾಟಿಂಗ್ ನಿರ್ವಹಣೆ ಪರಿಣಾಮ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹ್ಯಾಟ್ರಿಕ್ ಸೋಲಿಗೆ ಶರಣಾಗಿದೆ. ವಡೋದರಾ ಹಂತದಲ್ಲಿ ಸತತ ಎರಡು ಗೆಲುವು ದಾಖಲಿಸಿದ್ದ ಆರ್ಸಿಬಿ, ಇದೀಗ ತವರು ಮೈದಾನದಲ್ಲಿ ಸತತ 3 ಪಂದ್ಯಗಳಲ್ಲಿ ಸೋತು ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಉದ್ಘಾಟನಾ ಪಂದ್ಯದಲ್ಲಿ ಇದೇ ತಂಡದ ವಿರುದ್ಧ ಸೋಲುಂಡಿದ್ದ ಗುಜರಾತ್ ಜೈಂಟ್ಸ್, ಇದೀಗ 6 ವಿಕೆಟ್ಗಳಿಂದ ಗೆದ್ದು ಸೇಡು ತೀರಿಸಿಕೊಂಡಿದೆ. ಇದು ಜಿಜಿ ತಂಡದ 2ನೇ ಗೆಲುವಾಗಿದ್ದು, ಸತತ ಸೋಲುಗಳ ಬಳಿಕ ಲಯಕ್ಕೆ ಮರಳಿದೆ. ಇದೇ ಕಳಪೆ ಪ್ರದರ್ಶನ ಮುಂದುವರೆದರೆ ಹಾಲಿ ಚಾಂಪಿಯನ್ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಉಳಿದ 3 ಪಂದ್ಯ ಗೆದ್ದರಷ್ಟೇ ನಾಕೌಟ್ ಹಂತ ಸುಗಮವಾಗಲಿದೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ತನ್ನ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿತು. ಡಿಯಾಂಡ್ರಾ ಡಾಟಿನ್ ಮತ್ತು ತನುಜಾ ಕನ್ವರ್ ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.