ಭಾರತ, ಮೇ 13 -- ಭಾರತ ಸರ್ಕಾರವು ಐಫೋನ್‌ ಬಳಕೆದಾರರಿಗೆ ಗಂಭೀರ ಭದ್ರತಾ ಎಚ್ಚರಿಕೆ ನೀಡಿದೆ. ಆಪಲ್‌ನ ಐಒಎಸ್ ಮತ್ತು ಐಪ್ಯಾಡ್ಒಎಸ್ ಸಾಫ್ಟ್‌ವೇರ್‌ನಲ್ಲಿನ ಅನೇಕ ದೌರ್ಬಲ್ಯಗಳ ಬಗ್ಗೆ ಭಾರತ ಸರ್ಕಾರ ಆಪಲ್ ಐಫೋನ್ ಹಾಗೂ ಐಪ್ಯಾಡ್ ಬಳಕೆದಾರರಿಗೆ ಎಚ್ಚರಿಕೆ ನೀಡಿದೆ. ಈ ನ್ಯೂನತೆಗಳನ್ನು ದುರ್ಬಳಕೆ ಮಾಡಿಕೊಂಡರೆ, ದಾಳಿಕೋರರು ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಲು ಅನುವು ಮಾಡಿಕೊಡುತ್ತದೆ, ಅಥವಾ ನಿಮ್ಮ ಸಾಧನಗಳನ್ನು ಸಂಪೂರ್ಣವಾಗಿ ನಿಷ್ಪ್ರಯೋಜಕವಾಗಿಸುತ್ತದೆ. ಹೀಗಾಗಿ ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡವು (CERT-In) ಆಪಲ್ ಸಾಧನ ಬಳಕೆದಾರರಿಗೆ ಗಂಭೀರ ಎಚ್ಚರಿಕೆ ನೀಡಿದೆ.

ಭಾರತದಲ್ಲಿ ದಿನದಿಂದ ದಿನಕ್ಕೆ ಆಪಲ್ ಬಳಕೆದಾರರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಬಳಕೆದಾರರು ವಹಿಸಬೇಕಾದ ಜವಾಬ್ದಾರಿಯೂ ಹೆಚ್ಚಾಗುತ್ತದೆ.

ಕೇಂದ್ರ ಸರ್ಕಾರದ ಸಲಹೆಯ ಪ್ರಕಾರ, ಈ ದೌರ್ಬಲ್ಯವು ಆಪಲ್‌ನ ಹಳೆಯ ಮತ್ತು ಹೊಸ ಮಾದರ...