New Delhi, ಮೇ 15 -- ರಾಜಕಾರಣದ ವಿಚಾರಕ್ಕೆ ಬಂದರೆ ಅಧಿಕಾರವೇ ಮುಖ್ಯ ಎಂಬ ಆಶಯ ಈಗ ಹೆಚ್ಚು ಚಾಲ್ತಿಯಲ್ಲಿದೆ. ಹೀಗಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಸೈದ್ಧಾಂತಿಕ ಭಿನ್ನಮತ ಇರುವಂತಹ ಪಿಡಿಪಿ ಜತೆಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದ ಬಿಜೆಪಿ ಈಶಾನ್ಯ ರಾಜ್ಯದಲ್ಲಿ ಮತ್ತೊಂದು ರಾಜಕೀಯ ಅಚ್ಚರಿಯ ಬೆಳವಣಿಗೆಗೆ ವೇದಿಕೆ ಒದಗಿಸುತ್ತಿದೆಯಾ? ಹೀಗೊಂದು ವದಂತಿ ಹರಡಿದೆ. ಕಳೆದ ಮೂರು ತಿಂಗಳಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಇದರ ನಡುವೆ, ಭಾರತೀಯ ಜನತಾ ಪಕ್ಷ ಮತ್ತು ಕಾಂಗ್ರೆಸ್ ಈಗ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚಿಸುವ ಸಾಧ್ಯತೆ ಇದೆ ಎಂಬ ಸುದ್ದಿ ಹರಡಿದೆ.

ಕಳೆದ ಒಂದೂವರೆ ವರ್ಷಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ನಿರ್ಧರಿಸಿತ್ತು. ಹಾಗೆ, ಈ ವರ್ಷದ ಫೆಬ್ರವರಿಯಲ್ಲಿ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ನಂತರ ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹ...