Mysuru, ಮೇ 11 -- ಮೈಸೂರು: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಂಗಳೂರು- ಮೈಸೂರು ಹೆದ್ದಾರಿ ಸಮೀಪದ ಕಾವೇರಿಯಲ್ಲಿ ಮೃತಪಟ್ಟಿರುವ ಭಾರತದ ಕೃಷಿ ತಜ್ಞ, ಪದ್ಮಶ್ರೀ ಡಾ.ಎಸ್.ಅಯ್ಯಪ್ಪನ್ ಅವರ ಸಾವಿನ ನಿಗೂಢತೆ ಇನ್ನೂ ಬಯಲಾಗಿಲ್ಲ. ಶ್ರೀರಂಗಪಟ್ಟಣ ಹಾಗೂ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸರು ಅವರ ಸಾವಿನ ಕುರಿತು ಕುಟುಂಬದವರು, ಪರಿಚಯಸ್ಥರಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆಕಸ್ಮಿಕವಾಗಿ ಸಾವಾಗಿದೆಯೋ ಅಥವಾ ಆತ್ಮಹತ್ಯೆಯನ್ನೇನಾದರೂ ಮಾಡಿಕೊಂಡರೋ ಇಲ್ಲವೇ ಬೇರೆ ರೀತಿಯಲ್ಲಿ ತೊಂದರೆಗೆ ಒಳಗಾಗಿ ಸಾವಿಗೀಡಾದರೋ ಎನ್ನುವ ಚರ್ಚೆಗಳು ಅಯ್ಯಪ್ಪನ್ ಅವರ ಆಪ್ತ ವಲಯದಲ್ಲಿ ನಡೆದಿವೆ.
ಈಗಾಗಲೇ ಮರಣೋತ್ತರ ಪರೀಕ್ಷೆಯ ಬಳಿಕ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದ್ದು, ಮೈಸೂರಿನ ಜೆಪಿನಗರದ ಅಕ್ಕಮಹಾದೇವಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ನಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ನಂತರ ಅಂತ್ಯಕ್ರಿಯೆ ನಡೆಸಲಾಗಿದೆ.
ಭಾರತದ 'ನೀಲಿ ಕ್ರಾಂತಿ'ಯಲ್ಲಿ ಪಾತ್ರ ವಹಿಸಿದ ಕೀರ್ತಿಗೆ ಪಾತ್ರರಾದ ಅಯ್ಯಪ...
Click here to read full article from source
To read the full article or to get the complete feed from this publication, please
Contact Us.