Delhi, ಮೇ 12 -- ದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ನಂತರ ಭಾರತವು ಪಾಕಿಸ್ತಾನದ ಉಗ್ರರ ವಿರುದ್ದ ಆರಂಭಿಸಿರುವ ಆಪರೇಷನ್‌ ಸಿಂದೂರ್‌ ಹಾಗೂ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದಿರುವ ಯುದ್ದದ ವಾತಾವರಣದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮೇ 12ರ ಸೋಮವಾರ ರಾತ್ರಿ 8ಕ್ಕೆ ಮಾತನಾಡಲಿದ್ದಾರೆ. ಸತತ ಹತ್ತು ದಿನದಿಂದ ಭಾರತವು ಈಗಾಗಲೇ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುದಾಣಗಳ ಮೇಲೆ, ವಾಯುಸೇನೆಗಳ ಮೇಲೆ ಧ್ವಂಸ ಸೇರಿದಂತೆ ಹಲವು ವಿಚಾರದಲ್ಲಿ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಅದರಲ್ಲೂ ಮೂರು ದಿನದ ಹಿಂದಿನ ಕದನ ವಿರಾಮ ಘೋಷಣೆ ನಂತರದ ಬೆಳವಣಿಗೆಗಳ ಕುರಿತು ಪ್ರಧಾನಿ ವಿವರಿಸುವ ನಿರೀಕ್ಷೆಯಿದೆ.

ಪಹಲ್ಗಾಮ್‌ನಲ್ಲಿ ಪತ್ನಿ ಹಾಗೂ ಮಕ್ಕಳ ಎದುರು ಭಾರತೀಯದ ಪ್ರವಾಸಿಗರನ್ನು ಹತ್ಯೆ ಮಾಡಲಾಗಿತ್ತು. ಈ ವೇಳೆ ಸೌದಿ ಅರೇಬಿಯಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಭಾರತಕ್ಕೆ ತುರ್ತು ಮ...