ಭಾರತ, ಮಾರ್ಚ್ 5 -- ಮಂಗಳೂರು: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ 45 ವಿಚಾರಣಾಧೀನಾ ಕೈದಿಗಳು ಫುಡ್ ಪಾಯಿಸನ್ ಆಗಿ ಅಸ್ವಸ್ಥರಾಗಿದ್ದಾರೆ. ಇವರಲ್ಲಿ ಒಬ್ಬ ಕೈದಿ ಸ್ಥಿತಿ ಗಂಭೀರವಾಗಿದೆ. ಇಂದು (ಮಾರ್ಚ್ 5, ಬುಧವಾರ) ಸಂಜೆ ಈ ಘಟನೆ ನಡೆದಿದ್ದು, ವಿಷಾಹಾರ ಸೇವನೆಯಿಂದಾಗಿ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿದ್ದಾರೆ. ಏಕಾಏಕಿ ವಾಂತಿ, ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿದ್ದಾರೆ. ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಅಸ್ವಸ್ಥ ಕೈದಿಗಳನ್ನು ಕೂಡಾ ಸಹ ಕೈದಿಗಳೇ ಹೊತ್ತು ಸಾಗಿಸಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ ಹೋಗುತ್ತೇವೆ ಎಂದು ಕೈದಿಗಳು ಪಟ್ಟು ಹಿಡಿದಿದ್ದರು. ಆಕ್ರೋಶಗೊಂಡಿದ್ದ ಕೈದಿಗಳನ್ನು ವಾಹನದಿಂದ ಕೆಳಗಿಳಿಸಿದ ಪೊಲೀಸರು, ಅಸ್ವಸ್ಥ ಕೈದಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.
ಸಂಜೆ 4.30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಸ್ವಸ್ಥಗೊಂಡ ಕೈದಿಗಳನ್ನು ಕಾರಾಗೃಹದ ಆ್ಯಂಬುಲೆನ್ಸ್, ಪೊಲೀಸ್ ವಾಹನಗಳಲ್ಲಿ ಜಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.