ಭಾರತ, ಏಪ್ರಿಲ್ 30 -- ಮಂಗಳೂರು: ಕಾರ್ಮಿಕನೋರ್ವನನ್ನು ಗುಂಪೊಂದು ಮನಸೋ ಇಚ್ಛೆ ಹಲ್ಲೆ ನಡೆಸಿ, ಕೊಲೆ ಮಾಡಿದ ಘಟನೆ ಮಂಗಳೂರು ಹೊರವಲಯದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ 20 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಇದೊಂದು ಶಾಂತಿ ಕದಡುವ ಕೃತ್ಯವಾಗಿದೆ ಎಂದಿದ್ದಾರೆ.
ಮಂಗಳೂರು ಹೊರವಲಯದ ಕುಡುಪುವಿನಲ್ಲಿ ಅಪರಿಚಿತ ಶವ ಸಿಕ್ಕಿದ್ದು, ಅದರ ತನಿಖೆ ನಡೆಸಿದಾಗ ಈ ಕೃತ್ಯ ಹೊರಬಂದಿದೆ. ತನಿಖೆ ನಡೆಸಿದ ಪೊಲೀಸರು ವ್ಯಕ್ತಿಯನ್ನು 30 ಮಂದಿಯ ತಂಡ ಕ್ಷುಲಕ ಕಾರಣಕ್ಕಾಗಿ ವ್ಯಕ್ತಿಹಯೊಬ್ಬನನ್ನು ಹಲ್ಲೆಗೈದು ಹತ್ಯೆ ಮಾಡಿದೆ ಎಂಬುದನ್ನು ದೃಢಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಮಂದಿಯನ್ನು ಆರೋಪಿಗಳು ಎಂದು ಗುರುತಿಸಿದ್ದು, ಇವರಲ್ಲಿ 20 ಮಂದಿಯನ್ನು ಬಂಧಿಸಲಾಗಿದೆ.
ಕೇರಳ ಮೂಲದ ವಯನಾಡ್ ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಅಶ್ರಫ್ ಹತ್ಯೆಗೀಡಾದ ವ್ಯಕ್ತಿ ಎಂದು ಪೊಲೀಸರು ದೃಢಪಡಿಸಿದ್ದಾರೆ. ಮಂಗಳೂರಿನಲ್ಲಿ...
Click here to read full article from source
To read the full article or to get the complete feed from this publication, please
Contact Us.