Maddur, ಮಾರ್ಚ್ 1 -- ಮಂಡ್ಯ: ಕೆಎಸ್ಆರ್ಟಿಸಿ ಬಸ್ ಕಾರಿನ ಟೈರ್ ಪಂಕ್ಚರ್ ಆಗಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಮುಖಾಮುಖಿ ಡಿಕ್ಕಿಯಾಗಿ ಸಾಫ್ಟ್ವೇರ್ ಎಂಜಿನಿಯರ್ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರು ಪ್ರಜಾವಾಣಿ ಪತ್ರಿಕೆ ಉಪಸಂಪಾದಕಿ ಹರವು ಸ್ಪೂರ್ತಿ ಅವರ ಪತಿ, ಮದ್ದೂರು ತಾಲ್ಲೂಕು ಕೆ.ಎಂ.ದೊಡ್ಡಿ ವೆಂಕಟೇಶ್ ಅವರ ಪುತ್ರ ಬೆಂಗಳೂರಿನ ಖಾಸಗಿ ಕಂಪೆನಿಯ ಸಾಫ್ಟ್ವೇರ್ ಇಂಜಿನಿಯರ್. ಶನಿವಾರ ಬೆಂಗಳೂರಿನಿಂದ ಸ್ವಗ್ರಾಮ ಕೆ.ಎಂ.ದೊಡ್ಡಿಗೆ ವಿ.ಮನು ಟಾಟಾ ನಿಕ್ಸಾನ್ ಕಾರಿನಲ್ಲಿ ಪ್ರಯಾಣ ಬೆಳೆಸುತ್ತಿದ್ದಾಗ ಮಳವಳ್ಳಿಯಿಂದ ಕೆ.ಎಂ.ದೊಡ್ಡಿ ಮಾರ್ಗ ಮದ್ದೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ಮದ್ದೂರು ಪೊಲೀಸರು ತಿಳಿಸಿದ್ದಾರೆ.
ಬಸ್ನ ಮುಂಬದಿಯ ಚಕ್ರ ಪಂಕ್ಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿಯಾದ ಪರಿಣಾಮ ...
Click here to read full article from source
To read the full article or to get the complete feed from this publication, please
Contact Us.