ಭಾರತ, ಮೇ 27 -- ಬೆಂಗಳೂರು: ಟ್ರಾಫಿಕ್ ಪೊಲೀಸ್ ತಪಾಸಣೆ ವೇಳೆ ಪೊಲೀಸರ ಅಸಡ್ಡೆ ಕಾರಣ ಅಪಘಾತ ಸಂಭವಿಸಿ ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ವ್ಯಾಪಕ ಜನಾಕ್ರೋಶ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಜನರು ತಮ್ಮ ಭಾವನೆ, ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಟೀಕೆಗಳು ವ್ಯಕ್ತವಾಗಿವೆ. ರಾಜಕೀಯವಾಗಿ ಕೂಡ ಈ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್ ಸೇರಿ ಹಲವು ಈ ಬಗ್ಗೆ ಕಾಮೆಂಟ್ ಮಾಡಿದ್ದಾರೆ.
"ಮಂಡ್ಯದಲ್ಲಿ ಸಂಭವಿಸಿರುವ ಮುಗ್ಧ ಬಾಲಕಿಯ ದುರ್ಮರಣ ನನಗೆ ತೀವ್ರ ದುಃಖವುಂಟು ಮಾಡಿದೆ. ನಾಯಿ ಕಡಿತದ ಹಿನ್ನಲೆಯಲ್ಲಿ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ತನ್ನ ತಂದೆ-ತಾಯಿ ಜತೆಯಲ್ಲಿ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಹಸುಕಂದ ಹೀಗೆ ಅಕಾಲ ಮರಣಕ್ಕೆ ತುತ್ತಾಗಿರುವುದು ನನ್ನ ಮನಸ್ಸನ್ನು ಕಲಕಿದೆ. ಸಂಚಾರಿ ಪೊಲೀಸರು ಕರ್ತವ್ಯದಲ್ಲಿದ್ದಾಗ ಅತ್ಯಂತ ಸೂಕ್ಷ್ಮವಾಗಿ ವರ್ತಿಸಬೇಕು. ವಾಹನಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರನ್ನು ಏಕಾಏಕಿ ರಸ್ತೆ...
Click here to read full article from source
To read the full article or to get the complete feed from this publication, please
Contact Us.