Mandya, ಏಪ್ರಿಲ್ 1 -- ಮೇಲುಕೋಟೆ: ಶ್ರೀ ವಿಶ್ವಾವಸು ಸಂವತ್ಸರದ ವೈರಮುಡಿ ಬ್ರಹ್ಮೋತ್ಸವಕ್ಕೆ ಪೂರ್ವಭಾವಿಯಾಗಿ ಮೇಲುಕೋಟೆಯ ಕಲ್ಯಾಣಿಯಲ್ಲಿ ಸೋಮವಾರ ಭವ್ಯವಾಗಿ ಅಲಂಕೃತವಾದ ತೆಪ್ಪೋತ್ಸವ ಮಂಟಪದಲ್ಲಿ ಶ್ರೀ ಚೆಲುವನಾರಾಯಣಸ್ವಾಮಿಗೆ ಪ್ರಥಮ ತೆಪ್ಪೋತ್ಸವ ಸಂಭ್ರಮದಿಂದ ನೆರವೇರಿತು. ಚೆಲುವನಾರಾಯಣಸ್ವಾಮಿಯ ಜಲವಿಹಾರದ ವೈಭವವನ್ನು ಭಕ್ತರು ಕಣ್ತುಂಬಿಕೊಂಡರು.

ಮೇಲುಕೋಟೆ ಚೆಲುವಾರಾಯಸ್ವಾಮಿ ದೇವಸ್ಥಾನಕ್ಕೆ ಸೋಮವಾರ ಪಾಂಡವಪುರ ಖಜಾನೆಯಿಂದ ತಂದ ಅಮೂಲ್ಯ ಮುತ್ತುಮುಡಿ ಮುತ್ತಗಳ ಹಾರಗಳನ್ನು ಚೆಲುವನಾರಾಯಣಸ್ವಾಮಿಗೆ ಅಲಂಕರಿಸಿ ಸಂಜೆ ವೈಭವದ ಉತ್ಸವ ನೆರವೇರಿಸಲಾಯಿತು. ಮಹೂರ್ತಪಠಣದ ನಂತರ ತೆಪ್ಪಮಂಟಪದಲ್ಲಿ ಚೆಲುವನಾರಾಯಣಸ್ವಾಮಿ ಮತ್ತು ರಾಮಾನುಜಾಚಾರ್ಯರನ್ನು ಪ್ರತಿಷ್ಠಾಪಿಸಿ ತೆಪ್ಪೋತ್ಸವಕ್ಕೆ ಚಾಲನೆ ನೀಡಲಾಯಿತು. ಕಲ್ಯಾಣಿಯಲ್ಲಿ ಇದ್ದ ಅಲಂಕೃತ ತೆಪ್ಪದಲ್ಲಿ ದೇವರನ್ನು ಕೂರಿಸಿ ಮೂರು ಪ್ರದಕ್ಷಿಣೆ ಹಾಕಿ ಪ್ರಥಮ ತೆಪ್ಪೋತ್ಸವ ಆಚರಿಸಲಾಗಿದ್ದು, ರಾತ್ರಿ 8 ಗಂಟೆಗೆ ಸಂಪನ್ನವಾಯಿತು. ತೆಪ್ಪೋತ್ಸವಕ್ಕೆ ಮುನ್ನ ವಿದ್ವಾನ್ ಆನಂದ್ ತಂ...