Bengaluru, ಮೇ 26 -- ಮೈಸೂರು: ಖಾದ್ರಿ ಶಾಮಣ್ಣ ಸ್ಮಾರಕ ಟ್ರಸ್ಟ್ (ರಿ.) ಕೊಡಮಾಡುವ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಈ ಬಾರಿ ಹಿರಿಯ ಪತ್ರಕರ್ತರಾದ ಮೈಸೂರಿನ ಡಾ. ಕೂಡ್ಲಿ ಗುರುರಾಜ ಅವರಿಗೆ ಲಭಿಸಿದೆ. ಪ್ರಶಸ್ತಿಯು 15 ಸಾವಿರ ರೂ. ನಗದು ಹಾಗೂ ಫಲಕ ಹೊಂದಿದೆ. ಕೂಡ್ಲಿ ಗುರುರಾಜ ಅವರು ಮೂಲತಃ ಮೈಸೂರಿನವರು. ಕಿರಿಯ ವಯಸ್ಸಿನಲ್ಲೇ ಪತ್ರಿಕೋದ್ಯಮಕ್ಕೆ ಬಂದವರು.
ಪತ್ರಿಕೋದ್ಯಮದಲ್ಲಿ ಡಾಕ್ಟರೇಟ್ ಪಡೆದು ಅಧ್ಯಾಪಕರಾಗಿ ಹಾಗೂ ಪತ್ರಕರ್ತರಾಗಿ ಮೈಸೂರಿನ ಆರತಿ ಪತ್ರಿಕೆಯಿಂದ ವೃತ್ತಿ ಆರಂಭಿಸಿ, ಮೈಸೂರು ಮಿತ್ರ, ಆಂದೋಲನ ಪತ್ರಿಕೆಗಳಲ್ಲಿ ದುಡಿದು ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯ ಕರ್ನಾಟಕ, ಟೈಮ್ಸ್ ಆಫ್ ಇಂಡಿಯಾ ಕನ್ನಡ ಆವೃತ್ತಿ, ವಿಜಯ ನೆಕ್ಟ್, ಉದಯವಾಣಿ ಪತ್ರಿಕೆಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಪಡೆದವರು. ಹುಬ್ಬಳ್ಳಿ, ಬೆಂಗಳೂರಿನಲ್ಲಿ ವರದಿಗಾರರಾಗಿ ಕೆಲಸ ಮಾಡಿ, ಈಗ ಮೈಸೂರಿನಲ್ಲಿ ಜನಮಿತ್ರ ಪತ್ರಿಕೆ ವಿಶೇಷ ವರದಿಗಾರರು. ಪತ್ರಿಕೋದ್ಯಮದ ಬಗ್ಗೆ ಗ್ರಂಥಗಳನ್ನೂ ರಚಿಸಿದ್ದಾರೆ. ಪತ್ರಿಕೋದ್ಯಮ ವಿದ್ಯಾ...
Click here to read full article from source
To read the full article or to get the complete feed from this publication, please
Contact Us.