Bengaluru, ಮೇ 27 -- ಮೈಸೂರು: ಮೈಸೂರಿನ ಅವಧೂತ ದತ್ತಪೀಠದಿಂದ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ ಸಲ್ಲಿಸಲಾಗಿದೆ. ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಅವಧೂತ ದತ್ತಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆದ ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದ 26ನೇ ಬ್ರಹ್ಮೋತ್ಸವ ಸಂದರ್ಭದಲ್ಲಿ ದೇಣಿಗೆ ನೀಡಲಾಗಿದೆ.

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ, ಕಿರಿಯ ಶ್ರೀ ದತ್ತ ವಿಜಯಾನಂದ ತೀರ್ಥಸ್ವಾಮೀಜಿಯವರ ಸಮ್ಮುಖದಲ್ಲಿ ನಡೆದ ಬ್ರಹ್ಮೋತ್ಸವದ ಸಂದರ್ಭದಲ್ಲಿ ಉಗ್ರರ ವಿರುದ್ಧ ಹೋರಾಡಿದ ಮತ್ತು ದೇಶದ ರಕ್ಷಣೆಗೆ ಪಣ ತೊಟ್ಟಿರುವ ಭಾರತೀಯ ಸೇನೆಗೆ 25 ಲಕ್ಷ ರೂಪಾಯಿ ದೇಣಿಗೆ ಸಲ್ಲಿಸಲಾಗಿದೆ.

ಬ್ರಹ್ಮೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಕೊಡಗು ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಶಾಸಕ ಶ್ರೀವತ್ಸ ಸೇರಿದಂತೆ ಹಲವು ಮಂದಿ ಗಣ್ಯರು ಭಾಗಿಯಾಗಿದ್ದರು. ಸಂಸದ ಯದುವೀರ್ ಮೂಲಕ ಅವಧೂತ ದತ್ತ ಪೀಠದಿಂದ 25 ಲಕ್ಷ ರೂಪಾಯಿ ಚೆಕ್ ಹಸ್ತಾಂತರ ಮಾಡಲಾಗಿದೆ. 25 ಲಕ್ಷ ದೇಣಿಗೆ ಸ್ವೀಕರಿಸಿ ಶುಭ ಕೋರಿದ ಸಂಸದ ಯದುವೀರ್, ಕಾಣಿಕೆಯನ...