Bengaluru, ಮೇ 6 -- ಮೈಸೂರು: ಮೈಸೂರಿನಲ್ಲಿ ನಡೆದಿದ್ದ ರೌಡಿಶೀಟರ್ ಕಾರ್ತಿಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಲ್ಲಾ ಪೊಲೀಸರು ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಅಡಗಿದ್ದ ಕೊಲೆ ಆರೋಪಿಗಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ಆರೋಪಿಗಳಾದ ಪ್ರವೀಣ್, ಆನಂದ್ ಗೌಡ, ಅವಿನಾಶ್, ಚಂದು, ರವಿ, ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ಸೆರೆಗೆ ಮೂರು ತಂಡ ನಿಯೋಜಿಸಿದ್ದ ಮೈಸೂರು ಜಿಲ್ಲಾ ಎಸ್ಪಿ ವಿಷ್ಣುವರ್ಧನ್, ಪ್ರಕರಣ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೈಸೂರು ದಕ್ಷಿಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶೇಖರ್, ಬನ್ನೂರು ಠಾಣೆ ಇನ್ಸ್ಪೆಕ್ಟರ್ ಮನೋಜ್ ಕುಮಾರ್, ಜಯಪುರ ಪಿಎಸ್ಐ ಪ್ರಕಾಶ್ ಅತ್ತಿಮನಿ, ಇಲವಾಲ ಠಾಣೆ ಪಿಎಸ್ಐ ಮಹೇಶ್ ಕುಮಾರ್ ಅವರ ನೇತೃತ್ವದ ತಂಡಕ್ಕೆ ಲಾಕ್ ಸಿಕ್ಕಿ ಬಿದ್ದಿರುವ ಕೊಲೆ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
ಪೊಲೀಸ್ ವಿಚಾರಣೆ ಸಂದರ್ಭದಲ್ಲಿ ದೊರೆತ ಮಾಹಿತಿಯಂತೆ ಈ ಕೊಲೆ ಹಣಕ್ಕಾಗಿ ಅಲ್ಲ, ಆಂಟಿಯಿಂದಾಗಿ ...
Click here to read full article from source
To read the full article or to get the complete feed from this publication, please
Contact Us.