ಭಾರತ, ಮೇ 6 -- ಮೈಸೂರು : ಬೆಳಗಾವಿ ಸಾರ್ವಜನಿಕ ಸಭೆಯಲ್ಲಿ‌ ಎಎಸ್‌ಪಿಗೆ ಸಿಎಂ ಸಿದ್ದರಾಮಯ್ಯ ಬೈದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಸಿಎಂ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ವೀಡಿಯೋ ಮಾಡಿದ ಮೈಸೂರು ಜೈಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಮೈಸೂರು ಕೇಂದ್ರ‌ ಕಾರಾಗೃಹದ ವಾರ್ಡರ್ ಮಧುಕರ್‌ ಬಂಧನವಾಗಿದ್ದು, ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಠಾಣೆ ಪೊಲೀಸರು ಮಧುಕರ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

5.33 ನಿಮಿಷಗಳ ವೀಡಿಯೋ ಮಾಡಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮಧುಕರ್, ಏಪ್ರಿಲ್ 28ರಂದು ವಿಡಿಯೊ ಮಾಡಿ, ಪ್ರತೀ ಹಂತದಲ್ಲೂ ಸಿದ್ದರಾಮಯ್ಯ ವಿರುದ್ಧ ಅತ್ಯಂತ ಕೀಳು ಮಟ್ಟದ ಭಾಷೆ ಬಳಕೆ ಮಾಡಿ, ತಮ್ಮ ಕೆಲವು ಸ್ನೇಹಿತರಿಗೆ ಶೇರ್ ಮಾಡಿದ್ದರು. ಬಳಿಕ ಇಲಾಖೆ ವಿಚಾರಣೆ ಕಾಯ್ದಿರಿಸಿ, ಜೈಲು ಸೂಪರಿಟೆಂಡೆಂಟ್ ಮಧುಕರ್‌ ಅವರನ್ನು ಸಸ್ಪೆಂಡ್ ಮಾಡಿದ್ದರು.

ಸಿಎಂ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ವೀಡಿಯೋ ಮಾಡಿದ ಹಿನ್ನೆಲೆಯಲ್ಲಿ ಮೈಸೂ...