ಭಾರತ, ಮಾರ್ಚ್ 29 -- Myanmar Earthquake: ಮ್ಯಾನ್ಮಾರ್‌ನಲ್ಲಿ ಶುಕ್ರವಾರ ಸಂಭವಿಸಿದ ಪ್ರಬಲ ಭೂಕಂಪದ ಕಾರಣ ಅನೇಕ ಬೃಹತ್ ಕಟ್ಟಡಗಳು ನೆಲಸಮವಾಗಿದ್ದು, ಕನಿಷ್ಠ 1000ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 2000ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಆಸ್ಪತ್ರೆಗಳು ಭರ್ತಿಯಾಗಿದ್ದು, ಚಿಕಿತ್ಸೆಗಾಗಿ ಪರದಾಡುವಂತೆ ಮಾಡಿದೆ. ಶುಕ್ರವಾರ (ಮಾರ್ಚ್ 28) ರಾತ್ರಿ ಮತ್ತೆ ಭೂಕಂಪ ಸಂಭವಿಸಿದ್ದು, ಹಾನಿ ಪ್ರಮಾಣವನ್ನು ಹೆಚ್ಚಾಗುವಂತೆ ಮಾಡಿದೆ. ಥಾಯ್ಲೆಂಡ್‌ನ ಬ್ಯಾಂಕಾಂಕ್‌ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಕನಿಷ್ಠ 6 ಜನ ಮೃತಪಟಿದ್ದಾರೆ. ಅಫ್ಘಾನಿಸ್ತಾನದಲ್ಲೂ ಭೂಕಂಪ ಸಂಭವಿಸಿದ ಬಗ್ಗೆ ವರದಿಯಾಗಿದೆ.

"ನಾನು ಪರಿಹಾರ ಕಾರ್ಯಗಳಿಗಾಗಿ ಅಂತಾರಾಷ್ಟ್ರೀಯ ಬೆಂಬಲವನ್ನು ಕೋರಿದ್ದೇನೆ. ಎಎಚ್‌ಎ ಕೇಂದ್ರ ಮತ್ತು ಭಾರತದ ಬೆಂಬಲಕ್ಕಾಗಿ ಕೆಲವು ಕೊಡುಗೆಗಳನ್ನು ಅನುಮತಿಸಿದ್ದೇನೆ" ಎಂದು ಜುಂಟಾ ಮುಖ್ಯಸ್ಥ ಆಂಗ್ ಹ್ಲೈಂಗ್ ಅವರು ಸರ್ಕಾರಿ ಸ್ವಾಮ್ಯದ ಎಂಆರ್‌ಟಿವಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಶುಕ್ರವ...