ಭಾರತ, ಮಾರ್ಚ್ 28 -- ಯುಗಾದಿ ಹಣಕಾಸು ವರ್ಷ ಭವಿಷ್ಯ: ಪಂಚಾಂಗದ ಪ್ರಕಾರ ಕೆಲವೇ ದಿನಗಳಲ್ಲಿ ಹಳೆಯ ವರ್ಷ ಮುಗಿದು ಹೊಸ ವರ್ಷಕ್ಕೆ ಕಾಲಿಡುತ್ತೇವೆ. ಯುಗಾದಿ ಹಬ್ಬವು ಹೊಸ ವರ್ಷದ ಮೊದಲ ದಿನ. ಈ ಹೊಸ ವರ್ಷದಲ್ಲಿ ಸಂಕಷ್ಟಗಳು ಕಳೆದು ಸುಖ, ಶಾಂತಿ, ನೆಮ್ಮದಿ, ಉತ್ತಮ ಆರೋಗ್ಯ, ಹೊಸ ಅವಕಾಶ, ಸಂಪತ್ತು ಸಮೃದ್ಧಿಯನ್ನು ನಿರೀಕ್ಷಿಸುತ್ತ ಆಶಾವಾದಿಗಳಾಗಿ ಬದುಕುವುದು ಸಾಮಾನ್ಯ. ಬಹುತೇಕ ಸಂದರ್ಭದಲ್ಲಿ ಜನರು ತಮ್ಮ ರಾಶಿಗೆ ಅನುಗುಣವಾಗಿ ವರ್ಷ ಭವಿಷ್ಯವನ್ನು ಕಾತರದಿಂದ ವೀಕ್ಷಿಸುತ್ತಾರೆ. ತಮ್ಮ ಹಣಕಾಸು ಭವಿಷ್ಯ ಹೇಗಿರಲಿದೆ ಎಂದು ತಿಳಿದುಕೊಳ್ಳುವವರು ಇದ್ದಾರೆ. ಶ್ರೀ ವಿಶ್ವಾವಸು ಸಂವತ್ಸರದ ಸಿಂಹದಿಂದ ಕಟಕದವರಿಗೆ ನಾಲ್ಕು ರಾಶಿಯವರ ಹಣಕಾಸು ವರ್ಷ ಭವಿಷ್ಯ ಇಲ್ಲಿದೆ.

ಉತ್ತಮ ಆದಾಯವಿರುತ್ತದೆ. ಖರ್ಚು ವೆಚ್ಚಗಳು ಕಡಿಮೆಯಾಗಿರುತ್ತದೆ. ಆದರೆ ಅತಿಯಾದ ಸಹಾಯದ ಗುಣದಿಂದ ಹಣದ ಕೊರತೆಯನ್ನು ಎದುರಿಸುವಿರಿ. ಕಷ್ಟವೆನಿಸಿದರೂ ಆಸ್ತಿ ಗಳಿಸುವ ಸಲುವಾಗಿ ಹಣವನ್ನು ಉಳಿಸುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಹಣವನ್ನು ವಿನಿಯೋಗಿಸುವ ಮುನ...