Nagpur, ಮಾರ್ಚ್ 30 -- Ugadi 2025: ಯುಗಾದಿ ಹಬ್ಬದ ದಿನವಾದ ಇಂದು (ಮಾರ್ಚ್ 30) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಗಪುರದ ದೀಕ್ಷಾ ಭೂಮಿ, ಸ್ಮೃತಿ ಮಂದಿರಕ್ಕೂ ಭೇಟಿ ನೀಡಿದರು. ಪ್ರಧಾನ ಮಂತ್ರಿಯಾದ ಬಳಿಕ ಇದೇ ಮೊದಲ ಸಲ ಆರ್‌ಎಸ್‌ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ ನರೇಂದ್ರ ಮೋದಿ ಅವರು ಇದೇ ವೇಳೆ ದೀಕ್ಷಾ ಭೂಮಿಯಲ್ಲಿ ಡಾ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಸ್ಮೃತಿ ಮಂದಿರದಲ್ಲಿ ಆರ್‌ಎಸ್‌ಎಸ್‌ ಸಂಸ್ಥಾಪಕ ಡಾ ಕೆಬಿ ಹೆಡ್ಗೇವಾರ್ ಅವರ ಪ್ರತಿಮೆಗೂ ಪುಷ್ಪ ನಮನ ಸಲ್ಲಿಸಿದರು. ಪ್ರಧಾನ ಮಂತ್ರಿ ಮೋದಿ ಅವರು ಸಂಘದ ಪ್ರಧಾನ ಕಚೇರಿಯಲ್ಲಿ ನಡೆಯುವ ಯುಗಾದಿ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನ ಮಂತ್ರಿಯಾದ ಬಳಿಕ ಇದೇ ಮೊದಲ ಸಲ ಅವರು ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಭೇಟಿ ನೀಡಿರುವಂಥದ್ದು.

ನಾಗಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೀಕ್ಷಾಭೂಮಿಗೂ ಹೋಗಿ ಡಾ ಭೀಮಾರಾವ್ ಅಂಬೇಡ್ಕರ್ ಅವರ ಪ್ರತಿಮೆಗೂ ಪುಷ್ಪ ನಮನ ಸಲ್ಲಿಸಿದ್ದರು. ಬಾಬಾಸಾಹೇಬ್ ಅವರು ಸಾವಿರಾರು ಅನುಯಾಯಿಗಳೊಂದಿಗೆ ಬೌ...