Mangalore, ಮೇ 13 -- ಮಂಗಳೂರು: ರಕ್ತದಾನಿಗಳೇ ಇತ್ತ ಗಮನಿಸಿ.ಮಂಗಳೂರು, ಉಡುಪಿಗಳ ಬ್ಲಡ್ ಬ್ಯಾಂಕ್ ನಲ್ಲಿ ರಕ್ತ ಖಾಲಿಯಾಗುತ್ತಿದೆ!!. ಸಾಧ್ಯವಾದರೆ, ಬ್ಲಡ್ ಬ್ಯಾಂಕ್ ನಲ್ಲಿ ರಕ್ತ ನೀಡುವ ಮೂಲಕ ಸಹಾಯ ಮಾಡಿ.ಸಾವಿರಾರು ರೋಗಿಗಳು ಇದಕ್ಕೆ ಪ್ರಯೋಜನ ಪಡೆಯಬಹುದು. ಮಾಧ್ಯಮಗಳ ಮೂಲಕ ಈಗಾಗಲೇ ಬ್ಲಡ್ ಬ್ಯಾಂಕ್ ಅಧಿಕಾರಿಗಳು ರಕ್ತದಾನ ಮಾಡುವಂತೆ ಕರೆ ನೀಡುತ್ತಿದ್ದಾರೆ. ಬ್ಲಡ್ ಬ್ಯಾಂಕ್ ಅಧಿಕಾರಿ ಡಾ.ಶರತ್ ಕುಮಾರ್ ರಕ್ತದಾನ ಅಭಿಯಾನ ಆರಂಭಿಸಿದ್ದಾರೆ. ರಕ್ತದಾನದ ಕ್ಯಾಂಪ್‌ಗಳನ್ನು ಆಯೋಜಿಸುವಂತೆ ಸಂಘ ಸಂಸ್ಥೆಗಳಿಗೆ ಅವರು ಕರೆ ನೀಡಿದ್ದಾರೆ.ಮಂಗಳೂರು ನಗರದ ಬ್ಲಡ್ ಬ್ಯಾಂಕ್‌ಗಳಲ್ಲಿ ಭಾರೀ ರಕ್ತದ ಅಭಾವ ಉಂಟಾಗಿದೆ. ಪರಿಣಾಮ ವಿವಿಧ ಆಸ್ಪತ್ರೆಗಳಲ್ಲಿ ಬೇಡಿಕೆಗೆ ಅನುಗುಣವಾಗಿ ರಕ್ತ ದೊರೆಯುತ್ತಿಲ್ಲ ಎಂಬುದೀಗ ಆತಂಕಕಾರಿ ಸುದ್ದಿ. ಬಹುತೇಕ ಬ್ಲಡ್ ಬ್ಯಾಂಕ್‌ಗಳು ರಕ್ತದ ಕೊರತೆಯನ್ನು ಎದುರಿಸುತ್ತಿದೆ. ಪರಿಣಾಮ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತಕ್ಷಣಕ್ಕೆ ಬೇಕಾದಷ್ಟು ರಕ್ತ ದೊರೆಯುತ್ತಿಲ್ಲ. ಆದ್ದರಿಂದ ತುರ...