Bengaluru,ಬೆಂಗಳೂರು, ಮಾರ್ಚ್ 14 -- ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ಉತ್ತರ ಕ್ಷೇತ್ರವೂ ಒಂದು. ಈ ಕ್ಷೇತ್ರವನ್ನು 1952 ರಿಂದ 1977 ರವರೆಗೆ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರು ಮೂರು ಬಾರಿ ಪ್ರತಿನಿಧಿಸಿದ್ದರು. ಬೆಂಗಳೂರು ನಗರದ ಉತ್ತರ ಭಾಗದ ವಿಧಾನಸಭಾ ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ರಚಿಸಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 5 ಮತ್ತು ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕೆ.ಆರ್.ಪುರಂ, ಯಶವಂತಪುರ, ದಾಸರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರಂ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಬ್ಯಾಟರಾಯನಪುರ, ಹೆಬ್ಬಾಳ ಮತ್ತು ಪುಲಕೇಶಿನಗರ ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುವ ರಿಯಲ್ ಎಸ್ಟೇಟ್ ವ್ಯವಹಾರ ರಾಜಕಾರಣಿಗಳ ಆಕರ್ಷಣೆಯ ಕೇಂದ್ರಬಿಂದುವಾಗಿದೆ.

ಡಿ.ವಿ. ಸದಾನಂದ ಗೌಡ ಮೂರು ತಿಂಗಳ ಹಿಂದೆ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋ...