Bengaluru, ಮೇ 8 -- ಬೆಂಗಳೂರು: ಬೆಳಗಾಗಿ ಮತ್ತು ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ್ ರೈಲು ಓಡಾಟ ನಡೆಸಲಿದ್ದು, ಇದು ರಾಜ್ಯಕ್ಕೆ ಬರಲಿರುವ 11ನೇ ವಂದೇ ಭಾರತ್ ರೈಲು ಆಗಿದೆ. ಸಂಪೂರ್ಣ ಹೊಸ ರೈಲು ಸೇವೆ ಇದಾಗಿದ್ದು, ಈಗಾಗಲೇ ಅಸ್ತಿತ್ವದಲ್ಲಿರುವ ಬೆಂಗಳೂರು- ಧಾರವಾಡ- ಬೆಂಗಳೂರು ವಂದೇ ಭಾರತ್ ರೈಲಿನ ವಿಸ್ತರಣೆಯಾಗಿರುವುದಿಲ್ಲ ಎಂದು ರೈಲ್ವೆ ಹೇಳಿದೆ. ಈ ಮೊದಲು ಧಾರವಾಡ- ಬೆಂಗಳೂರು ವಂದೇ ಭಾರತ್ ರೈಲನ್ನು ಬೆಳಗಾಗಿ ವಿಸ್ತರಿಸಲಾಗುತ್ತದೆ ಎನ್ನುವ ಮಾತುಕತೆ ನಡೆದಿತ್ತು. ಆದರೆ ಈ ಬಾರಿ, ಅದರ ಬದಲಿಗೆ ಹೊಸ ರೈಲು ಓಡಾಟ ನಡೆಸಲು ನಿರ್ಧರಿಸಲಾಗಿದೆ.

ಪ್ರಸ್ತುತ ನೈಋತ್ಯ ರೈಲ್ವೆಗಾಗಿ ಮೀಸಲಾದ ರೇಕ್ ಅನ್ನು ಮಂಜೂರು ಮಾಡುವ ಮೂಲಕ ಬೆಂಗಳೂರು ಮತ್ತು ಬೆಳಗಾವಿ ಮಧ್ಯೆ ಸಂಪೂರ್ಣವಾಗಿ ಹೊಸ ಸೇವೆಯನ್ನು ಪ್ರಾರಂಭಿಸಲು ರೈಲ್ವೆ ನಿರ್ಧರಿಸಿದೆ. SWR ನ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ್ ಕನಮಾಡಿ, ಅಧಿಕೃತ ಸಂವಹನಕ್ಕಾಗಿ ಇನ್ನೂ ಕಾಯಲಾಗುತ್ತಿದೆ ಎಂದು ಹೇಳಿದ್ದರೂ, ಹಿರಿಯ ಅಧಿಕಾರಿಯೊಬ್ಬರು ಇದು ಹೊಸ ವಂದೇ ಭಾರತ್ ರೈ...