Bengaluru, ಮೇ 27 -- ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳು ಸಂಪೂರ್ಣ ಸನ್ನದ್ಧರಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶನ ನೀಡಿದ್ದಾರೆ. ಈಗ ಭಯಪಡುವ ಅಗತ್ಯವಿಲ್ಲ, ಆದರೆ ಪರಿಸ್ಥಿತಿ ಹದಗೆಟ್ಟರೆ ನಾವು ವೆಂಟಿಲೇಟರ್‌ಗಳು, ಆಮ್ಲಜನಕ, ಔಷಧಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧವಾಗಿಡಬೇಕು ಎಂದು ಅವರು ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಹೇಳಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಹಿರಿಯ ಅಧಿಕಾರಿಗಳು ಮತ್ತು ವೈದ್ಯಕೀಯ ತಜ್ಞರೊಂದಿಗೆ ಸಭೆ ನಡೆಸಿದ ಸಿಎಂ, ಪೂರ್ವಭಾವಿ ಕ್ರಮಕ್ಕೆ ಒತ್ತು ನೀಡಿದರು. ರಾಜ್ಯದಾದ್ಯಂತದ ಆಸ್ಪತ್ರೆಗಳು ಅಗತ್ಯ ಮೂಲಸೌಕರ್ಯ ಮತ್ತು ಸಿಬ್ಬಂದಿಯೊಂದಿಗೆ ಸನ್ನದ್ಧವಾಗಿರಬೇಕು ಎಂದು ಅವರು ಹೇಳಿದ್ದಾರೆ. ಜಿಲ್ಲಾ ಆಸ್ಪತ್ರೆಗಳು ಸಂಪೂರ್ಣ ಸನ್ನದ್ಧವಾಗಿರಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಬೇಡ ಎಂದು ಎಚ್ಚರಿಕೆ ನೀಡಿದ್ದಾರೆ.

ವಯಸ್...