Bengaluru, ಮೇ 13 -- ಬೆಂಗಳೂರು: ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಜೀವಸಾರ್ಥಕತೆ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯು ಕೇಂದ್ರಗಳನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ರಾಜ್ಯದ ಮೂರು ಸ್ಥಳಗಳಲ್ಲಿ BMST ಅಡಿಯಲ್ಲಿ HLA ಪ್ರಯೋಗಾಲಯಗಳನ್ನು ಸ್ಥಾಪಿಸಲು KMC&RI ಮಾದರಿಯನ್ನು ಅನ್ವೇಷಿಸುಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.‌ ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟವರಿಂದ ಅಂಗಾಂಗಗಳನ್ನು ಪಡೆಯುವ ಪ್ರಯತ್ನಗಳು ಸರ್ಕಾರಿ ಜಿಲ್ಲಾಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳಲ್ಲಿ ಹೆಚ್ಚಾಗಬೇಕು. ಈ ಬಗ್ಗೆ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿಲ್ಲ ಏಕೆ ಎಂದು ಅಧಿಕಾರಿ...