Bengaluru, ಮೇ 8 -- ನವದೆಹಲಿ: ಬೆಂಗಳೂರು- ಕನಕಪುರ ನಡುವಣ ರಸ್ತೆ ಆರು ಪಥಕ್ಕೆ ಉನ್ನತೀಕರಣ, ನೆನೆಗುದಿಗೆ ಬಿದ್ದಿರುವ ಕಗ್ಗಲಿಪುರ ಟೋಲ್ ವರೆಗಿನ ರಸ್ತೆ ಕಾಮಗಾರಿ ಪೂರ್ಣಗೊಳಿಸಲು, ಸ್ಯಾಟಲೈಟ್ ರಿಂಗ್ ರಸ್ತೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಶೀಘ್ರ ಪರಿಹಾರ ಬಿಡುಗಡೆ, ಹೆಬ್ಬಾಳ ಜಂಕ್ಷನ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕ ಮೇಲ್ಸೇತುವೆ ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ನೆರವು ಹಾಗೂ ಸಹಕಾರ ನೀಡುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಅಭಿವೃದ್ಧಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ನವದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದರು.

ಹಾಲಿ ನಾಲ್ಕು ಪಥ ಇರುವ ಹೆದ್ದಾರಿ 209 (ಬೆಂಗಳೂರು-ಕನಕಪುರ) ಅನ್ನು ಎರಡೂ ಬದಿಯಲ್ಲಿ ಸರ್ವಿ...