Bengaluru, ಮೇ 20 -- ಬೆಂಗಳೂರು: ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ನಿಂದನೆಯ ಮಾತುಗಳನ್ನು ಆಡಿ, ಮಾನಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಐಟಿ ಸೆಲ್‌ನ ಅಮಿತ್ ಮಾಳವೀಯ ಮತ್ತು ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಜಾಮೀನು ರಹಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಶ್ರೀಕಾಂತ್ ಸ್ವರೂಪ್ ಬಿ. ಎನ್ ಎಂಬವರು ದೂರು ನೀಡಿದ್ದು, ಅದರನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಕರ್ನಾಟಕ ಯೂತ್ ಕಾಂಗ್ರೆಸ್ ಎಕ್ಸ್ ಖಾತೆಯಲ್ಲಿ ಎಫ್‌ಐಆರ್ ಪ್ರತಿಯನ್ನು ಪೋಸ್ಟ್ ಮಾಡಿದೆ.

ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಸುದ್ದಿ ಹರಡುವುದು ಮತ್ತು ಅಶಾಂತಿಯನ್ನು ಪ್ರಚೋದಿಸಲು ಕಾರಣರಾದ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ನಕಲಿ ಸುದ್ದಿಗಳನ್ನು ಹರಡುವ ಎಲ್ಲರಿಗೂ ಇದು ಒಂದು ಎಚ್ಚರಿಕೆಯಾಗ...