ಭಾರತ, ಮಾರ್ಚ್ 15 -- ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದ ನಂತರ ರೋಹಿತ್ ಶರ್ಮಾ ಅವರ ಟೆಸ್ಟ್ ನಾಯಕತ್ವಕ್ಕೂ ಜೀವ ಬಂದಿದೆ. ಜೂನ್ ಮತ್ತು ಆಗಸ್ಟ್ ನಡುವೆ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ರೋಹಿತ್ ಶರ್ಮಾ ಅವರು ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಆಸ್ಟ್ರೇಲಿಯಾದ ವಿರುದ್ಧ ಹಿಟ್ಮ್ಯಾನ್ ನಾಯಕತ್ವದಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿತ್ತು. ಇದಾದ ಬಳಿಕ ರೋಹಿತ್ ನಾಯಕತ್ವದ ಬಗ್ಗೆ ಪ್ರಶ್ನೆ ಎದ್ದಿತ್ತು.
ಬಿಜಿಟಿ ಸರಣಿ ಸೋತ ನಂತರ ಕೊನೆಯ ಸಿಡ್ನಿ ಟೆಸ್ಟ್ಗೆ ತಂಡದಿಂದ ಹೊರಗುಳಿದಿದ್ದರು. ಈ ಟೆಸ್ಟ್ನಲ್ಲಿ ಜಸ್ಪ್ರೀತ್ ಬುಮ್ರಾ ಭಾರತದ ಉಸ್ತುವಾರಿ ವಹಿಸಿಕೊಂಡಿದ್ದರು. ಚಾಂಪಿಯನ್ಸ್ ಟ್ರೋಫಿ ಗೆದ್ದ ನಂತರ, ರೋಹಿತ್ಗೆ ಬಿಸಿಸಿಐನ ಸಂಪೂರ್ಣ ಬೆಂಬಲ ಸಿಕ್ಕಿದೆ. ಇಂಡಿಯನ್ ಎಕ್ಸ್ಪ್ರೆಸ್ ಪ್ರಕಾರ, ಮಂಡಳಿ ಮತ್ತು ಆಯ್ಕೆದಾರರು ರೋಹಿತ್ರನ್ನು ಮತ್ತೊಂದು ದೊಡ್ಡ ಪ್ರವಾಸಕ್ಕೆ ನಾಯಕನಾಗಿ ಕಳುಹಿಸಲು ನಿರ್ಧರಿಸಿದ್ದಾರೆ. ಹೀಗಾ...
Click here to read full article from source
To read the full article or to get the complete feed from this publication, please
Contact Us.