Vijayapur, ಮೇ 7 -- ವಿಜಯಪುರ:ದಯವೇ ಧರ್ಮದ ಮೂಲವಯ್ಯ ಎಂಬ ತಿರುಳು ಹೊಂದಿರುವ ಬಸವ ಧರ್ಮ ಪಾಲನೆಯಾದರೆ ವಿಶ್ವದಲ್ಲಿ ಯುದ್ಧದ ವಾತಾವರಣವೇ ಇರಲ್ಲ. ಮುಂದಿನ ದಿನಗಳಲ್ಲಿ ಬಸವ ಭಾರತವಾಗಲಿದೆ. ಆಗ ದೇಶದಲ್ಲಿ ಕಾಯಕ, ದಾಸೋಹ, ಸಮಾನತೆ, ಸಾಮರಸ್ಯ ನೆಲೆಸಲಿದೆ ̤ ಹಿಂದೆ ನಾವು ಲಿಂಗಾಯತ ಧರ್ಮ ಮಾನ್ಯತೆಗೆ ಪ್ರಯತ್ನಿಸಿದ್ದೆವು. ಆದರೆ, ಕೆಲವರು ಧರ್ಮ ಒಡೆಯಲು ಪ್ರಯತ್ನಿಸಿದೆ ಎಂದು ಆರೋಪಿಸಿದರು. ಅಂದು ಸ್ವತಂತ್ರ ಧರ್ಮದ ಮಾನ್ಯತೆ ದೊರಕಿದ್ದರೆ ಇಂದು ಲಿಂಗಾಯಿತ ಎಲ್ಲ ಉಪಪಂಗಡಗಳಿಗೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತಿದ್ದವು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುಚಾರಿ ಸಚಿವ ಎಂ. ಬಿ. ಪಾಟೀಲ‌ ಹೇಳಿದ್ದಾರೆ.

ಇಂದು ಬುಧವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಧನ್ಯಾಳ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಮಾಡಿ ಅವರು ಮಾತನಾಡಿದರು. ಬಸವಣ್ಣನವರು‌ ಲಿಂಗಾಯಿತ ಧರ್ಮ ಸ್ಥಾಪಿಸಿದ 12ನೇ ಶತಮಾನದಿಂದ 1881ರ ವರೆಗೆ ಲಿಂಗಾಯಿತ ಪ್ರತ್ಯೇಕ ಧರ್ಮವಾಗಿತ್ತು. ಆದರೆ, 1881 ರಲ್ಲಿ ಮೈಸೂರು ಅ...