Tumakuru,Tumkur,ತುಮಕೂರು, ಏಪ್ರಿಲ್ 24 -- ತುಮಕೂರು: ಜನ ನಾಯಕರೇ, ಅಧಿಕಾರಿಗಳೇ ನಮ್ಮ ಓಟು ಮಾತ್ರ ನಿಮಗೆ ಸಾಕಾ, ನಮಗೆ ಸೌಲಭ್ಯ ಬೇಡವೇ? ನಮ್ಮ ಕುಟುಂಬಕ್ಕೆ ಮೂಲ ಸೌಕರ್ಯ ನೀಡದಿದ್ದರೆ ನಮ್ಮ ಓಟು ನಿಮಗೆ ನೀಡೆವು, ಪ್ರತಿ ಗುಡಿಸಲುಗಳ ಬಾಗಿಲು ಮುಂದೆ ನಾಮಫಲಕ ಅಳವಡಿಕೆಯಾಗಿದೆ. ಈ ದೃಶ್ಯ ಕಂಡು ಬಂದಿದ್ದು ಕೊರಟಗೆರೆ ತಾಲೂಕು ನೀಲಗೊಂಡನಹಳ್ಳಿ ಐ.ಕೆ.ಕಾಲೋನಿಯಲ್ಲಿ..

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ನೀಲಗೊಂಡನಹಳ್ಳಿ ಗ್ರಾಪಂ ವ್ಯಾಪ್ತಿಯ ಐ.ಕೆ.ಕಾಲೋನಿಯಲ್ಲಿ ಕಳೆದ 25 ವರ್ಷದಿಂದ ವಾಸವಿರುವ 20ಕ್ಕೂ ಅಧಿಕ ಅಲೆಮಾರಿ ಕೂಲಿ ಕಾರ್ಮಿಕ ಕುಟುಂಬಗಳಿಗೆ ಮೂಲ ಸೌಲಭ್ಯವೇ ಮರೀಚಿಕೆಯಾಗಿ ಕುಡಿಯುವ ನೀರು ಮತ್ತು ಹಗಲಿನಲ್ಲಿ ಶೌಚಾಲಯಕ್ಕೆ ಸಮಸ್ಯೆ, ರಾತ್ರಿ ವೇಳೆ ಬೆಳಕಿಲ್ಲದೆ ಕಾಡು ಪ್ರಾಣಿಗಳಿಂದ ಭಯದ ವಾತಾವರಣ ಸೃಷ್ಟಿಯಾಗಿದೆ.

ಐ.ಕೆ.ಕಾಲೋನಿಯ ಪಿಡ್ಲ್ಯೂಡಿ ಕಚೇರಿ ಆವರಣದಲ್ಲೇ 25 ವರ್ಷದಿಂದ ಅಲೆಮಾರಿ ಕಾರ್ಮಿಕರು ವಾಸವಿದೆ. ಆದರೆ 4 ತಿಂಗಳ ಹಿಂದೆ ಪಿಡ್ಲ್ಯೂಡಿ ಅಧಿಕಾರಿ ವರ್ಗ ಮತ್ತು ಸ್ಥಳೀಯ ಗ್ರಾಪಂ ಸದಸ್...