ಭಾರತ, ಏಪ್ರಿಲ್ 21 -- ಏಪ್ರಿಲ್ 18ರಂದು ಪಂಜಾಬ್ ಕಿಂಗ್ಸ್ ವಿರುದ್ಧ ತವರಿನಲ್ಲಿ ಆರ್ಸಿಬಿ ಸೋತಿತ್ತು. ಇದಾದ ಎರಡೇ ದಿನಗಳ ಅಂತರದಲ್ಲಿ ಬೆಂಗಳೂರು ಅವರದ್ದೇ ತವರಿನಲ್ಲಿ ಪಂಜಾಬ್ ಎದುರು ಗೆದ್ದು ಸೇಡು ತೀರಿಸಿಕೊಂಡಿದೆ. ಈ ಪಂದ್ಯ ಸೇಡಿನ ಸಮರವಾಗಲು ಕಾರಣ ಏನೆಂದರೆ ಎಂ ಚಿನ್ನಸ್ವಾಮಿ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಸೋತ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಸೌಂಡ್ ಕೇಳಿಸ್ತಿಲ್ಲ ಎನ್ನುವ ರೀತಿ ಸಿಗ್ನಲ್ ಮಾಡಿದ್ದರು. ಇದು ಆರ್ಸಿಬಿ ಮತ್ತು ತಂಡದ ಅಭಿಮಾನಿಗಳನ್ನು ಕೆರಳಿಸಿತ್ತು. ಇದೇ ಕಾರಣಕ್ಕೆ ಸೇಡಿನ ಸಮರದೊಂದಿಗೆ ಕಣಕ್ಕಿಳಿದಿದ್ದ ಆರ್ಸಿಬಿ ಮುಲ್ಲನ್ಪುರದಲ್ಲಿ ಅದ್ಭುತ ಗೆಲುವು ದಾಖಲಿಸಿತು.
ಆರಂಭಿಕನಾಗಿ ಕಣಕ್ಕಿಳಿದು ಅಜೇಯರಾಗಿ ಉಳಿದ ವಿರಾಟ್ ಕೊಹ್ಲಿ, 19ನೇ ಓವರ್ನ 5ನೇ ಎಸೆತದಲ್ಲಿ ಜಿತೇಶ್ ಶರ್ಮಾ ಗೆಲುವಿನ ಸಿಕ್ಸರ್ ಸಿಡಿಸುತ್ತಿದ್ದಂತೆಯೇ ಅಪರೂಪದ ಸಂಭ್ರಮಾಚರಣೆಯೊಂದಿಗೆ ಪಿಬಿಕೆಎಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ನನ್ನು ಕಿಚಾಯಿಸಿದರು. ಗೇಲಿ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಆದರೆ ಕೊಹ್ಲಿ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.