ಭಾರತ, ಏಪ್ರಿಲ್ 2 -- ಬೆಂಗಳೂರು: ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳು ಖಾಲಿಯಾಗಿದ್ದು, ನಾಮನಿರ್ದೇಶನ ಪ್ರಕ್ರಿಯೆ ಆರಂಭವಾಗಿದೆ. ಪರಿಷತ್ ಸದಸ್ಯರಾಗಿದ್ದ ಕಾಂಗ್ರೆಸ್ನ ಯು.ಬಿ.ವೆಂಕಟೇಶ್, ಪ್ರಕಾಶ್ ರಾಠೋಡ್ ಮತ್ತು ಜೆಡಿಎಸ್ ನ ಕೆ.ಎಂ. ತಿಪ್ಪೇಸ್ವಾಮಿ ಅವರ ಅವಧಿ ಜನವರಿಗೆ ಕೊನೆಗೊಂಡಿದೆ. ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸಿ.ಪಿ.ಯೋಗೇಶ್ವರ್ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಹೀಗಾಗಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡಲು ಆಡಳಿತಾರೂಢ ಕಾಂಗ್ರೆಸ್ ಗೆ ಅವಕಾಶ ಇದೆ.
ಇರುವ 4 ಸ್ಥಾನಗಳಿಗೆ 150 ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಇವರಲ್ಲಿ ಕನಿಷ್ಠ ನೂರಕ್ಕೂ ಹೆಚ್ಚು ಮಂದಿಗೆ ಅರ್ಹತೆಯೂ ಇದೆ. ಸಮುದಾಯ, ಜಿಲ್ಲೆ, ಜಾತಿ ಧರ್ಮ, ಪಕ್ಷಕ್ಕೆ ಸಲ್ಲಿಸಿರುವ ಸೇವೆ ಎಲ್ಲವನ್ನೂ ಪರಿಗಣಿಸಿದರೆ ಇರುವ ನಾಲ್ಕಕ್ಕೆ ಯಾರನ್ನು ಆಯ್ಕೆ ಮಾಡುವುದು ಎನ್ನುವುದು ತಲೆ ನೋವಾಗಿ ಪರಿಣಮಿಸಿದೆ. ಪಕ್ಷದ ಮೂಲಗಳ ಪ್ರಕಾರ ಪರಿಷತ್ ಸದಸ್ಯರಾಗಲು ಇವರೆಲ್ಲರೂ ರಾಜ್ಯ ಹಾಗೂ ರಾಷ್ಟ್...
Click here to read full article from source
To read the full article or to get the complete feed from this publication, please
Contact Us.