Bangalore, ಏಪ್ರಿಲ್ 8 -- Veera Chandrahasa trailer:‌ ಕೆ.ಜಿ.ಎಫ್, ಸಲಾರ್, ಭೈರತಿ ರಣಗಲ್, ಉಗ್ರಂ ನಂಥಹ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ಸಂಯೋಜಿಸುವ ಮೂಲಕ ಸಂಗೀತ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ರವಿ ಬಸ್ರೂರು, ಈಗ ದಕ್ಷಿಣ ಕನ್ನಡ ಭಾಗದ ಸಂಸ್ಕೃತಿಯ ಪ್ರತೀಕವಾದ‌ ಯಕ್ಷಗಾನ ಕಲೆಯ ಹಿರಿಮೆಯನ್ನು ಜಗತ್ತಿಗೆ ಹೇಳಲು ಹೊರಟಿದ್ದಾರೆ, ಯಕ್ಷಗಾನ ಪ್ರಸಂಗ ಆಧರಿತ "ವೀರ ಚಂದ್ರಹಾಸ" ಎಂಬ ಚಿತ್ರವನ್ನು ಅವರು ನಿರ್ದೇಶಿಸಿದ್ದು, ಆ ಚಿತ್ರ ಇದೇ ತಿಂಗಳ 18 ರಂದು ಬಿಡುಗಡೆಯಾಗುತ್ತಿದೆ.

ಎಸ್ ಎಸ್ ರಾಜಕುಮಾರ್ ನಿರ್ಮಾಣದ, ಪ್ರತಿಷ್ಠಿತ ಹೊಂಬಾಳೆ ಫಿಲಂಸ್ ಅರ್ಪಿಸುತ್ತಿರುವ ಈ ಚಿತ್ರದ ಮೂಲಕ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ, ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಯಕ್ಷಗಾನವನ್ನು ಬೆಳ್ಳಿ ಪರದೆಯಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಯಕ್ಷಗಾನ ಕಲಾವಿದರನ್ನು ಗೌರವಿಸುವ ಸಮಾರಂಭ ಕುಂದಾಪುರದ ಆನೆಗುಡ್ಡೆ ಶ್ರೀವಿನಾಯಕನ ಸನ್ನಿಧಿಯಲ್ಲಿ ನಡೆಯಿತು.

ವೇ...