Bengaluru, ಮಾರ್ಚ್ 14 -- Narayana Narayana: ಸಿನಿಮಾ ಮತ್ತು ಕಿರುತೆರೆ ಎರಡರಲ್ಲೂ ಗುರುತಿಸಿಕೊಂಡಿರುವ ನಟ ಮಜಾ ಟಾಕೀಸ್ ಖ್ಯಾತಿಯ ಪವನ್, ಇದೀಗ ನಾರಾಯಣ ನಾರಾಯಣ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಸಿನಿಮಾ, ಇನ್ನೇನು ಬಿಡುಗಡೆಯ ಸನಿಹದಲ್ಲಿದೆ. ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ಈ ಚಿತ್ರಕ್ಕೆ ಶ್ರೀಕಾಂತ್ ಕೆಂಚಪ್ಪ ಆಕ್ಷನ್ ಕಟ್ ಹೇಳಿದ್ದಾರೆ.
ನಾರಾಯಣ ನಾರಾಯಣ ಸಿನಿಮಾತಂಡ ಟ್ರೇಲರ್ ಲಾಂಚ್ ಮಾಡುವ ಮೂಲಕ ಮಾಧ್ಯಮದ ಮುಂದೆ ಹಾಜರಾಗಿತ್ತು. ಸಿನಿಮಾದ ಎರಡು ಹಾಡುಗಳು ಮತ್ತು ಟ್ರೈಲರ್ ಅನ್ನು ರಿಲೀಸ್ ಮಾಡುವ ಮೂಲಕ ಚಿತ್ರಾಭಿಮಾನಿಗಳಿಗೆ ಚಿತ್ರಮಂದಿರಕ್ಕೆ ಆಹ್ವಾನ ನೀಡಿದೆ ಚಿತ್ರತಂಡ. ಈ ಸಿನಿಮಾದಲ್ಲಿನ ಎರಡು ಸುಂದರ ಹಾಡುಗಳು ಈಗಾಗಲೇ ಪ್ರೇಕ್ಷಕರ ಗಮನ ಸೆಳೆಯುತ್ತಿವೆ. ಸತ್ಯ ರಾಧಾಕೃಷ್ಣ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಕೃಷ್ಣನ ಬಗ್ಗೆ ಇರುವ ಹಾಡು ಹಾಗೂ ಖ್ಯಾತ ಚಿತ್ರಸಾಹಿತಿ ಕವಿರಾಜ್ ಅವರು ಬರೆದಿರುವ ರೊಮ್ಯಾಂಟಿಂಕ್ ಹಾಡು ಕೇಳಲು ಇಂಪಾಗಿದ್ದು ...
Click here to read full article from source
To read the full article or to get the complete feed from this publication, please
Contact Us.